ರಾಮನಗರ: ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾದಲ್ಲಿ ಭಾನುವಾರ ರಾತ್ರಿ ಟೋಲ್ ಪಡೆಯುವ ವಿಚಾರಕ್ಕೆ ಆರಂಭವಾದ ಗಲಾಟೆ ಯುವಕನ ಕೊಲೆಯೊಂದಿಗೆ ಅಂತ್ಯವಾಗಿದೆ.
ಮೃತ ಯುವಕನನ್ನು ತಾವರೆಕೆರೆ ಸಿಕ್ಕೆಪಾಳ್ಯ ನಿವಾಸಿ ಪವನ್ ನಾಯಕ್(26) ಎಂದು ಗುರುತಿಸಲಾಗಿದೆ. ಈತ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ ಬೆಂಗಳೂರು ಮೂಲದ ಯುವಕರ ಗುಂಪು ಹಣದ ವಿಚಾರವಾಗಿ ಟೋಲ್ನಲ್ಲಿ ಕೆಲಸ ಮಾಡುತ್ತಿದ್ದ ಪವನ್ ನಾಯಕ್ ಜತೆಗೆ ನಿನ್ನೆ ರಾತ್ರಿ ಗಲಾಟೆ ಮಾಡಿದ್ದಾರೆ.
ಈ ವೇಳೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಹೊಡೆದಾಟ ನಡೆದಿದೆ. ಇದನ್ನೇ ಗುರಿಯಾಗಿಸಿಕೊಂಡ ಯುವಕರ ತಂಡ ಪವನ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಬೆನ್ನಟ್ಟಿ ಹಾಕಿ ಸ್ಟಿಕ್ನಿಂದ ಹೊಡೆದು ಹೆಜ್ಜಲ ಸಮೀಪ ಕೊಲೆ ಮಾಡಿ ಪರಾರಿಯಾಗಿದೆ. ಮೃತದೇಹವನ್ನು ಬೆಂಗಳೂರು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣದ ದಾಖಲಿಸಿರುವ ಬಿಡದಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…
ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…
ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು…
ಭಾರತ ಸೇರಿದಂತೆ ಹಲವು ದೇಶಗಳು ಅನ್ಯದೇಶಿಗರಿಗೆ ತೆರೆದುಕೊಂಡಿಲ್ಲ ಎಂದ ಅಮೇರಿಕಾ ಅಧ್ಯಕ್ಷ ಜೋ ಬೈಡನ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ…
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಕುಂದಗೋಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಬೃಹತ್ ಬಹಿರಂಗ ಪ್ರಚಾರ…
ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ…