ರಾಮನಗರ

ಲಾರಿ ಟಿಟಿ ನಡುವೆ ಭೀಕರ ಅಪಘಾತ: ಮೂವರು ಸಾವು

ರಾಮನಗರ:  ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತದಿಂದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ತಡರಾತ್ರಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ಟಿಟಿ ವಾಹನ ಹೋಗುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಟಿಟಿ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದೆ.

ಟಿಟಿ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ashika S

Recent Posts

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

6 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

21 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

43 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

45 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

1 hour ago