ರಾಮನಗರ: ಪ್ರಧಾನಿ ಅಥವಾ ರಾಷ್ಟ್ರಪತಿ ಸ್ಥಾನ ನೀಡಿದರೂ ಬಿಜೆಪಿಗೆ ಸೇರುವುದಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಮಾಗಡಿಯಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರಕ್ಕಾಗಿ ಜೆಡಿಎಸ್ ಮತ್ತು ಇತರ ಪಕ್ಷಗಳು ಬಿಜೆಪಿಯೊಂದಿಗೆ ಕೈಜೋಡಿಸಲಿವೆ. ಜೆಡಿಎಸ್ಗೆ ಯಾವುದೇ ಸಿದ್ಧಾಂತ ಮತ್ತು ಅರ್ಹತೆ ಇಲ್ಲ ಮತ್ತು ಅಧಿಕಾರ ಪಡೆಯಲು ಯಾರೊಂದಿಗಾದರೂ ಕೈಜೋಡಿಸಬಹುದು.
“ನನ್ನನ್ನು ಬಿಜೆಪಿಯವರು ಹಿಂದೂ ವಿರೋಧಿ ಎಂದು ಟ್ಯಾಗ್ ಮಾಡಿದ್ದಾರೆ. ಸಿ.ಟಿ.ರವಿ (ಬಿಜೆಪಿ ಶಾಸಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ) ನನ್ನನ್ನು ಸಿದ್ದರಾಮುಲ್ಲಾ ಖಾನ್ ಎಂದು ಕರೆಯುತ್ತಾರೆ. ಮಹಾತ್ಮ ಗಾಂಧಿ ನಿಜವಾದ ಹಿಂದೂ ಆಗಿದ್ದರು. ಆದರೆ, ಗೋಡ್ಸೆಯನ್ನು ಪೂಜಿಸುವವರನ್ನು ನಿಜವಾದ ಹಿಂದೂಗಳು ಎಂದು ಕರೆಯಬಹುದೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಅವರಿಗೆ ಗೌರವವಿದೆಯೇ? ಅಂತಹ ಜನರೊಂದಿಗೆ ಮೈತ್ರಿ ಮಾಡಿಕೊಂಡ ಪಕ್ಷಗಳಿಗೆ ಏನಾದರೂ ಗೌರವವಿದೆಯೇ? ಎಂದು ಕೇಳಿದರು.
”ನಾನು ಸಿಎಂ ಆಗಿದ್ದ ಅವಧಿಯಲ್ಲಿ ಎಲ್ಲರಿಗೂ ಆಹಾರ ಭದ್ರತೆ ನೀಡಿದ್ದೇನೆ, ಬಿಜೆಪಿಯಿಂದ ಸಾಧ್ಯವಾಗಿಲ್ಲ, ಈ ಹಿಂದೆ ಏಳು ಕೆಜಿ ಅಕ್ಕಿ ನೀಡಲಾಗಿತ್ತು, ಅದನ್ನು ಬಿಜೆಪಿ ಸರಕಾರ ಐದು ಕೆಜಿಗೆ ಇಳಿಸಿದೆ, ನಾವು ಅಧಿಕಾರಕ್ಕೆ ಬಂದಾಗ ಮಹಿಳೆಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಮತ್ತು 2,000 ರೂಪಾಯಿ ನೀಡುತ್ತೇವೆ ಎಂದು ಅವರು ಹೇಳಿದರು.