ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸ್ಪೋಟದಲ್ಲಿ ಕರ್ನಾಟಕದ ಮೂಲದ ಇಬ್ಬರು ವೈದ್ಯರು ಭಾಗಿಯಾಗಿರುವುದು ವರದಿಯಾಗಿದೆ.ಕೊಯಮತ್ತೂರು ಖಾಸಗಿ ಆಸ್ಪತ್ರೆ ಮೇಲೆ ಎನ್ ಐ ಎ ದಾಳಿ ನಡೆಸಿದಾಗ ಈ ಸ್ಪೋಟಕ ಮಾಹಿತಿ ಲಭ್ಯವಾಗಿದೆ.
ಶಂಕಿತ ಉಗ್ರ ಮತೀನ್, ಶಾಜೀಬ್ ಗೆ ಹಣ ಸಂದಾಯ ಮಾಡಿರುವುದು ಬಯಲಾಗಿದೆ. ಇಬ್ಬರಿಗೂ ಹಣ ಸಂದಾಯ ಮಾಡಿದ ಹಿನ್ನೆಲೆ ಎನ್ ಐ ಎ ದಾಳಿ ನಡೆಸಿದೆ. ತಮಿಳುನಾಡಿನ ನಾರಾಯಣಗುರು ಖಾಸಗಿ ಆಸ್ಪತ್ರೆಯ ವೈದ್ಯರು ಇದರಲ್ಲಿ ಶಾಮೀಲಾಗಿದ್ದಾರೆ ಎನ್ನಲಾಗಿದೆ.

