ಬೆಂಗಳೂರು

ರಾಮೇಶ್ವರಂ ಕೆಫೆ ಬ್ಲಾಸ್ಟ್​ ಕೇಸ್: ಬಾಂಬ್​​ಗೆ ಇದನ್ನು ಬಳಕೆ ಮಾಡಿದ್ರಾ?

ಬೆಂಗಳೂರು: ನಗರದಲ್ಲಿ ನಡೆದ ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್​ನ ಪ್ರಕರಣದಲ್ಲಿ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಮಿಂಚಿನಂತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಪೋಟಕ್ಕೆ IED ಬಳಸಿದ್ರೂ ಹೇಗೆ ಬ್ಲಾಸ್ಟ್​ ಮಾಡಿದ್ರು ಅನ್ನೋ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್​​ ಆದ ಬಾಂಬ್​ನಲ್ಲಿ IED ಸುಧಾರಿತ ಸ್ಫೋಟಕ ಡಿವೈಸ್ ಬಳಸಿರುವುದು ಪತ್ತೆಯಾಗಿದೆ. ಕೃತ್ಯಕ್ಕೆ ಬಳಸಲಾದ ಡಿವೈಸ್ ಕುರಿತು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಈ ಬಾಂಬ್​​ ಅನ್ನ ಸ್ಥಳೀಯವಾಗಿ ಸಿಗುವ ಕಚ್ಚಾ ವಸ್ತುಗಳನ್ನ ಬಳಸಿ ಸಿದ್ಧಪಡಿಸಲಾಗುತ್ತದೆ.

ಮೊಳೆಗಳು, ಗಾಜಿನ ಚೂರು, ಗನ್ ಪೌಡರ್ ಅಥವಾ ಬೆಂಕಿ ಕಡ್ಡಿಯ ಮದ್ದುಗಳನ್ನೂ ಬಳಸಿ ತಯಾರಿಸಬಹುದು. ಪ್ರೆಷರ್ ಆಗುವಂತೆ ಡಿವೈಸ್​ ಅನ್ನು ಸೃಷ್ಟಿಸಿ ಸ್ಫೋಟಿಸಬಹುದು. ಕಚ್ಚಾ ವಸ್ತುಗಳ ಪ್ರಮಾಣ ಹೆಚ್ಚಾದಂತೆ ತೀವ್ರತೆ ಪಡೆದುಕೊಳ್ಳುತ್ತೆ. ಜಿಲೇಟಿನ್​ಗಳನ್ನ ಬಳಸಿ ಈ ಪ್ಲಾಸ್ಟಿಕ್ ಸ್ಫೋಟಕ ತಯಾರಿಕೆ ಮಾಡಲಾಗಿದೆ. ಪುಟ್ಟಿ ಎಕ್ಸ್​ಪ್ಲೋಸಿವ್ ಅಂತಲೂ ಈ ಪ್ಲಾಸ್ಟಿಕ್ ಎಕ್ಸ್​ಪ್ಲೋಸಿವ್​ಗಳನ್ನ ಕರೆಯಲಾಗುತ್ತದೆ. ಈ ರೀತಿ ಮಾಡಿರುವ ಡಿವೈಸನ್ನು ಯಾವುದೇ ಮೆಟಲ್ ಡಿಟೆಕ್ಟರ್ ಕಂಡು ಹಿಡಿಯಲ್ಲ. ಭದ್ರತಾ ಸಿಬ್ಬಂದಿ ಕಣ್ಣುತಪ್ಪಿಸಿ ಸಲೀಸಾಗಿ ತೆಗೆದುಕೊಂಡು ಹೋಗಬಹುದು. ಆದ್ರೆ ಸ್ಲೀಪರ್ ಸೆಲ್​ಗಳಿಲ್ಲದೆ IED ಬಾಂಬ್ ತಯಾರಿಸುವುದು ಸುಲಭವಲ್ಲ. ಸ್ಲೀಪರ್ ಸೆಲ್​ ಪೂರೈಸುವ ಬಿಡಿ ವಸ್ತುಗಳಿಂದ ಬಾಂಬ್ ತಯಾರಿಕೆ ಮಾಡಲಾಗಿದೆ.

ಇನ್ನು ಈ ಬಾಂಬ್​ ಸ್ಫೋಟ ಮಾಡಿದ್ದು ಹೇಗೆ ಅನ್ನೋದನ್ನ ಕಂಡು ಹಿಡಿಯಲು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago