ಬೆಂಗಳೂರು: ನಗರದ ವರ್ತೂರು ಪ್ರದೇಶದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಮಾಲೀಕ- ಪ್ರಾಂಶುಪಾಲರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗೆ ಬೀಗ ಹಾಕಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.
ಮೂಲಗಳ ಪ್ರಕಾರ ಆರೋಪಿಗಳು ಕೋರಮಂಗಲ ಪ್ರದೇಶದಲ್ಲಿ ಶಾಲೆ ನಿರ್ಮಿಸಲು ಅನುಮತಿ ಪಡೆದಿದ್ದರು, ಆದರೆ ವರ್ತೂರಿನಲ್ಲಿ ಅನಧಿಕೃತವಾಗಿ ಶಾಲೆಯನ್ನು ನಿರ್ಮಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಈ ಶಾಲೆಯಲ್ಲಿ ಓದುತ್ತಿರುವ 140 ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಗೊಂದಲಕ್ಕೀಡಾಗಿದ್ದು, ಶಾಲೆಯ ಬದಲಿ ಬಗ್ಗೆ ಚಿಂತಿಸಿದ್ದಾರೆ.
ಆ ಪ್ರದೇಶದಲ್ಲಿ ತಾವು ಆಯ್ಕೆ ಮಾಡಿದ ಶಾಲೆಯಲ್ಲಿ ತಮ್ಮ ವಾರ್ಡ್ಗಳಿಗೆ ಸೀಟು ದೊರಕಿಸಿಕೊಡುವುದಾಗಿ ಹಾಗೂ ಶುಲ್ಕವನ್ನು ಸರ್ಕಾರವೇ ನಿಗದಿಪಡಿಸಲಿದೆ ಎಂದು ಅಧಿಕಾರಿಗಳು ಪೋಷಕರಿಗೆ ಭರವಸೆ ನೀಡಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…