News Karnataka Kannada
Monday, May 06 2024
ಬೆಂಗಳೂರು

ವಿದ್ಯಾರ್ಥಿ ಯುವ ಜನರ ಪ್ರಣಾಳಿಕೆ ಬಿಡುಗಡೆ

ಲೋಕಸಭಾ ಚುನಾವಣೆ ಹಿನ್ನಲೆ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಸದಸ್ಯರು ಲೋಕಸಭಾ ಚುನಾವಣೆಗಾಗಿ ʻವಿದ್ಯಾರ್ಥಿ-ಯುವ ಜನರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಹಾಗೂ ಇದನ್ನು ಎಲ್ಲ ಪಕ್ಷಗಳು ಅನುಷ್ಠಾನಗೊಳಿಸಬೇಕು ಎಂದರು ಆಗ್ರಹಿಸಿದ್ದಾರೆ.
Photo Credit : NewsKarnataka

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಸದಸ್ಯರು ಲೋಕಸಭಾ ಚುನಾವಣೆಗಾಗಿ ʻವಿದ್ಯಾರ್ಥಿ-ಯುವ ಜನರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಹಾಗೂ ಇದನ್ನು ಎಲ್ಲ ಪಕ್ಷಗಳು ಅನುಷ್ಠಾನಗೊಳಿಸಬೇಕು ಎಂದರು ಆಗ್ರಹಿಸಿದ್ದಾರೆ.

ʻವಿದ್ಯಾರ್ಥಿ ಯುವಜನರ ಮೇಲೆ ಪರಿಣಾಮ ಬೀರುವಶಿಕ್ಷಣ ಮತ್ತು ಉದ್ಯೋಗ ಎಂಬ ಅವಳಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬೇಡಿಕೆಗಳನ್ನು ವಿದ್ಯಾರ್ಥಿ-ಯುವಜನರ ಪ್ರಣಾಳಿಕೆ ಮುಂದಿಟ್ಟಿದೆ. ಕೊಠಾರಿ ಆಯೋಗದ ಶಿಫಾರಸಿನ ಪ್ರಕಾರ ಜಿಡಿಪಿಯ ಶೇ 6ರಷ್ಟು ಶಿಕ್ಷಣಕ್ಕೆ ಮೀಸಲಿಡಬೇಕು. ಹಾಗೂ ಇದನ್ನು ರಾಜ್ಯಪಟ್ಟಿಗೆ ಸೇರಿಸಬೇಕು ಎಂದು ವಿದ್ಯಾರ್ಥಿ ಮುಖಂಡರು ಶನಿವಾರ ಸುದ್ಧಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ʻಪರಿಶಿಷ್ಟ ಜಾತಿ ಮತ್ತು ಪಂಗಡ, ಒಬಿಸಿ ಸೇರಿದಂತೆ ಎಲ್ಲ ಸಮುದಾಯ ವಿದ್ಯಾರ್ಥಿಗಳಿಗೆ ಮೀಸಲಾತಿ ಸೌಲಭ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಅಂಗನವಾಡಿ ಮತ್ತು ಶಾಲೆಗಳನ್ನು ಮುಚ್ಚುವ,ವಿಲೀನಗೊಳಿಸುವ ಪ್ರಯತ್ನಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿ ಜಿಲ್ಲೆಯ ದಲಿತರು, ಆದಿವಾಸಿಗಳು, ಒಬಿಸಿ ಮತ್ತು ಅಲ್ಪಸಂಖ್ಯಾತರಿಗೆ ವಸತಿ ನಿಲವ ನರ್ಮಿಸಬೇಕು. ಎನ್‌ಇಇಟಿ ಮತ್ತು ಜೆಇಇ ಸೇರಿದಂತೆ ಕೇಂದ್ರಿಕೃತ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸಬೇಕು. ಪ್ರತಿ ಜಿಲ್ಲಯಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೃಜು ಮತ್ತು ಆಸ್ಪತ್ರೆ ಸ್ಥಾಪಿಸಬೇಕು ಏಮದು ಆಗ್ರಹಿಸಿದರು.

ಇದರಲ್ಲಿ ದಲಿತ ವಿದ್ಯಾರ್ಥಿ ಪರಿಷತ್‌, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಸರ್ಸ್‌, ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಅಂಬೇಡ್ಕರ್‌ ಸ್ಟೂಡೆಂಟ್‌ ಅಸೋಸಿಯೇಷನ್‌, ಸ್ಟೂಡೆಂಟ್‌ ಫಾರ್‌ ಪೀಪಲ್ಸ್‌ ಡೆಮಾಕ್ರಸಿ, ಸ್ನಾತ್ತಾಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳು ಹಾಗೂ ಮುಖಂಡರು ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು