ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷದ ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ ಶಸ್ತ್ರ ಹಿಡಿಯದೆ ಹೋರಾಡಿ ಧರ್ಮ ಸ್ಥಾಪನೆ ಮಾಡಿದ ಎಂದರು.
ಸಂವಿಧಾನವನ್ನು ರಕ್ಷಿಸುವವರ ಕೈಯಲ್ಲಿ ಅಧಿಕಾರ ಇರಬೇಕು. ಸಂವಿಧಾನ ವಿರೋಧಿಗಳ ಕೈಗೆ ದೇಶದ ಅಧಿಕಾರವನ್ನು ನೀಡಿ ಪರಿತಪಿಸಬೇಡಿ ಎಂದರು.