News Karnataka Kannada
Saturday, May 18 2024
ಬೆಂಗಳೂರು

ಸಂತ್ರಸ್ತೆ ಅಪಹರಣ ಕೇಸ್‌ : ಭವಾನಿ ರೇವಣ್ಣ ಸಂಬಂಧಿ ಬಂಧನ

ಈಗಾಗಲೇ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಬಾರಿ ಸದ್ದು ಮಾಡುತ್ತಿದೆ.
Photo Credit : NewsKarnataka

ಬೆಂಗಳೂರು: ಈಗಾಗಲೇ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಬಾರಿ ಸದ್ದು ಮಾಡುತ್ತಿದೆ. ಅಲ್ಲದೇ ಅವರ ತಂದೆ ಸಚಿವ ಹೆಚ್​ಡಿ ರೇವಣ್ಣ ಅವರ ವಿರುದ್ಧವೂ ಕೇಸ್‌ ದಾಖಲಾಗಿದೆ. ಇದೀಗ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಸಂತ್ರಸ್ತೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರ ಸಂಬಂಧಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ನಾಪತ್ತೆಯಾದ ಸಂತ್ರಸ್ತೆಯ ಪುತ್ರ ಶುಕ್ರವಾರ (ಮೇ 03) ರಂದು ಕೆಆರ್​ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ. ಸಂತ್ರಸ್ತೆಯ ಪತ್ತೆಗೆ ವಿಶೇಷ ತನಿಖಾ ದಳ (SIT) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತ್ತು.

ಎಸ್​ಐಟಿ ತಂಡಗಳು ಗುರುವಾರ ತಡರಾತ್ರಿಯಿಂದಲೇ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಿದ್ದವು. ಇನ್ನು ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು