ಬೆಂಗಳೂರು: ಬಿಡದಿಯಿಂದ ನಾಪತ್ತೆಯಾದ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಬಳಿಕ ಕೈಲಾಸ ಅನ್ನೋ ಹೊಸ ದೇಶ ಹುಟ್ಟು ಹಾಕಿ ಪ್ರತ್ಯಕ್ಷನಾಗಿದ್ದ. ದ್ವೀಪವನ್ನು ಖರೀದಿಸಿ ಕೈಲಾಸ ದೇಶ ಮಾಡಿ ಭಾರತಕ್ಕೆ ಅಚ್ಚರಿ ನೀಡಿದ್ದ. ಇತ್ತೀಚೆಗೆ ನಿತ್ಯಾನಂದನ ಕೈಲಾಸದಲ್ಲಿ ನಟಿ ರಂಜಿತಾ ಪ್ರಧಾನಿ ಅನ್ನೋ ಘೋಷಣೆಯನ್ನು ಮಾಡಿದ್ದು ಸುದ್ದಯಾಗಿತ್ತು. ಇವೆಲ್ಲಾ ಬೆಳವಣಿಗೆ ಬಳಿಕ ಇದೀಗ ನಿತ್ಯಾನಂದ ಮತ್ತೆ ಭಾರಿ ಸಂಚಲನ ಸೃಷ್ಟಿಸಿದ್ದಾನೆ.
ಕೈಲಾಸ ದೇಶದಲ್ಲಿ ಶಿವರಾಜ್ ಕುಮಾರ್ ಅಭಿಯನದ ಕನ್ನಡ ಜೋಗಯ್ಯ ಹಾಡು ಸದ್ದು ಮಾಡಿದೆ. ಖುದ್ದು ನಿತ್ಯಾನಂದ ಜೋಗಯ್ಯ ಹಾಡಿಗೆ ಡ್ರಮ್ಸ್ ಬಾರಿಸುವ ಮೂಲಕ ಗಮನಸೆಳೆದಿದ್ದಾರೆ. ಈ ವಿಡಿಯೋ ಬಾರಿ ವೈರಲ್ ಆಗಿದೆ.
ಬೃಹತ್ ಸಂಗೀತ ಕಾರ್ಯಕ್ರಮದಲ್ಲಿ ಖುದ್ದು ನಿತ್ಯಾನಂದ ಜೋಗಯ್ಯ ಹಾಡಿಗೆ ಡ್ರಮ್ಸ್ ಬಾರಿಸಿದ್ದಾರೆ. ಇನ್ನು ಇತರ ಕೆಲ ಹಾಡುಗಳಿಗೂ ಡ್ರಮ್ಸ್ ಬಾರಿಸಿದ್ದಾರೆ. ಆದರೆ ಕೈಲಾಸದ ನಿತ್ಯಾನಂದನ ಅಧೀಕೃತ ಟ್ವಿಟರ್ ಖಾತೆಯಲ್ಲಿ ಜೋಗಯ್ಯ ಹಾಡಿಗೆ ಡ್ರಮ್ಸ್ ಬಾರಿಸುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ.