ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲೀಟ್ ಮಾಡುವಂತೆ ಡಿ ರೂಪಾಗೆ ಸುಪ್ರೀಂಕೋರ್ಟ್ ಆದೇಶ

ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್​ನ್ನು 24 ಗಂಟೆಯಲ್ಲಿ ಡಿಲೀಟ್ ಮಾಡುವಂತೆ ಡಿ.ರೂಪಾಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಎಲ್ಲಾ ಪೋಸ್ಟ್‌ ಅಳಿಸುವುದು ಅಸಾಧ್ಯವಾದರೆ, ಎಲ್ಲಾ ಕಾಮೆಂಟ್‌ಗಳನ್ನು, ಹೇಳಿಕೆ‌ ಹಿಂಪಡೆದಿದ್ದೇನೆ ಎಂಬ ಕನಿಷ್ಠ ಪೋಸ್ಟ್ ಹಾಕಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ.

ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಪೀಠದಿಂದ ಮೌಖಿಕ ನಿರ್ದೇಶನ ನೀಡಿದ್ದಾರೆ. ಪೋಸ್ಟ್ ಡಿಲೀಟ್ ಮಾಡಿದರ ಬಗ್ಗೆ ನಾಳೆಯೇ ಡಿ.ರೂಪಾ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

2023ರ ಫೆಬ್ರುವರಿ 14 ಹಾಗೂ 16 ರಂದು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಇದರಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತನ್ನ ವ್ಯಕ್ತಿತ್ವಕ್ಕೆ ರೂಪಾ ಧಕ್ಕೆ ತಂದಿದ್ದಾರೆ ಎಂದು ನ್ಯಾಯಾಲಯದಲ್ಲಿ ಧಾವೆ ಹೂಡಿದ್ದರು. ಸಿಂಧೂರಿ ದಾಖಲಿಸಿರುವ ದೂರು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಡಿ.ರೂಪಾ ಅರ್ಜಿ ಸಲ್ಲಿಸಿದ್ದರು.

ಮಧ್ಯಸ್ಥಿಕೆ ಮೂಲಕ ವಿವಾದ ಬಗೆಹರಿಸಿಕೊಳ್ಳಲು ಸುಪ್ರೀಂ ಸೂಚಿಸಿತ್ತು. ಹಾಗಾಗಿ ಇಬ್ಬರೂ ಇಂದು ಸುಪ್ರೀಂಕೋರ್ಟ್‌ಗೆ ಖುದ್ದು ಹಾಜರಾಗಿದ್ದರು. ಮಧ್ಯಸ್ಥಿಕೆ ವಿಫಲವಾಗಿದೆ ಎಂದು ಇಂದು ಕೋರ್ಟ್‌ಗೆ ತಿಳಿಸಲಾಗಿದೆ.

Ramya Bolantoor

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

9 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

33 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago