News Karnataka Kannada
Thursday, May 09 2024
ಬೆಂಗಳೂರು

ಕಾಂಗ್ರೇಸ್‌ ಎರಡನೇ ಪಟ್ಟಿಗೆ ಘೋಷಣೆಯೊಂದೇ ಬಾಕಿ : ಯಾರಿಗೆಲ್ಲ ಟಿಕೆಟ್? ಇಲ್ಲಿದೆ ವಿವರ

ಲೋಕಸಭಾ ಚುನಾವಣ ಹಿನ್ನೆಲೆ ಕಾಂಗ್ರಸ್‌ ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಮೊದಲನೇ ಪಟ್ಟಿ ಈಗಾಗಲೇ ಬಿಡುಗಡೆ ಆಗಿದೆ ಹಾಗೂ ಕಾಂಗ್ರೆಸ್‌ನ ಎರಡನೇ ಪಟ್ಟಿ ಕೂಡ ಅಂತಿಮ ಹಂತಕ್ಕೆ ತಲುಪಿದ್ದು ಘೋಷಣೆಯಷ್ಟೆ ಬಾಕಿ ಉಳಿದಿದೆ.
Photo Credit : NewsKarnataka

ಬೆಂಗಳೂರು: ಲೋಕಸಭಾ ಚುನಾವಣ ಹಿನ್ನೆಲೆ ಕಾಂಗ್ರಸ್‌ ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಮೊದಲನೇ ಪಟ್ಟಿ ಈಗಾಗಲೇ ಬಿಡುಗಡೆ ಆಗಿದೆ ಇದೀಗ ಕಾಂಗ್ರೆಸ್‌ನ ಎರಡನೇ ಪಟ್ಟಿ ಕೂಡ ಅಂತಿಮ ಹಂತಕ್ಕೆ ತಲುಪಿದ್ದು ಘೋಷಣೆಯಷ್ಟೆ ಬಾಕಿ ಉಳಿದಿದೆ. ರಾಜ್ಯದ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು ಹಾಗೂ ಬೆಂಬಲಿಗರು ಕುತೂಹಲದಿಂದ ಕಾಯುತ್ತಿದ್ದ ದಿನಕ್ಕೆ ಕೆಲವೇ ಘಂಟೆಗಳು ಬಾಕಿ ಇದೆ.ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸಿಇಸಿ ಸಭೆ ಬಳಿಕ ಕಾಂಗ್ರೆಸ್‌ ಅಭ್ಯರ್ತಿಗಳ ಪಟ್ಟಿ ಅಂತಿಮ ಗೊಂಡಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಎರಡನೇ ಪಟ್ಟಿ: ಸಂಭಾವ್ಯ ಅಭ್ಯರ್ಥಿಗಳು
ಚಿತ್ರದುರ್ಗ – ಚಂದ್ರಪ್ಪ
ರಾಯಚೂರು – ಕುಮಾರ ನಾಯ್ಕ್
ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್
ಧಾರವಾಡ – ವಿನೋದ್ ಅಸೂಟಿ
ಕೊಪ್ಪಳ – ರಾಜಶೇಖರ ಹಿಟ್ನಾಳ್
ಕಲಬುರಗಿ – ರಾಧಾಕೃಷ್ಣ ದೊಡ್ಮನಿ
ಬೀದರ್ – ಸಾಗರ್ ಖಂಡ್ರೆ
ದಕ್ಷಿಣ ಕನ್ನಡ – ಪದ್ಮರಾಜ್
ಮೈಸೂರು – ಎಂ.ಲಕ್ಷ್ಮಣ
ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
ಬೆಂಗಳೂರು ಕೇಂದ್ರ -ಮನ್ಸೂರ್ ಅಲಿ ಖಾನ್
ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
ಇನ್ನು ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ ಈ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಗ್ಗಂಟಾಗಿದೆ.
ಈ ಕರಿತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು, ಇದೀಗ ನಾಲ್ಕು 4 ಕ್ಷೇತ್ರ ಬಾಕಿ ಉಳಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.ಬೇರೆ ಪಕ್ಷದ ನಾಯಕರು ಕಾಂಗ್ರೆಸ್​ಗೆ ಬರುವ ಬಗ್ಗೆ ಬಹಿರಂಗವಾಗಿ ಮಾತನಾಡಲ್ಲ, ಕೆಲವು ಸಂಸದರ ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು