ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹಲವಾರು ಹುದ್ದೆಗಳನ್ನು ಬಿಜೆಪಿಯಲ್ಲಿ ಅಲಂಕರಿಸಿದ್ದರು. ಬಿಜೆಪಿಯ ಹಿರಿಯ ನಾಯಕ ಎಂದೇ ಗುರುತಿಸಿಕೊಂಡಿದ್ದರು. ತನ್ನದೇ ಆದ ರಾಜಕೀಯ ವರ್ಚಸ್ಸನ್ನೇ ಗಿಟ್ಟಿಸಿಕೊಂಡಿದ್ದರು. ಆದರೆ ದಿಢೀರ್ ಆಗಿ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬಿಜೆಪಿ ಹೈಕಮಾಂಡ್ ತಮಗೂ ತಮ್ಮ ಪುತ್ರ ಕಾಂತೇಶ್ ಟಿಕೇಟ್ ನೀಡುವುದಿಲ್ಲ ಎಂದು ಖಾತ್ರಿಯಾದ ಬಳಿಕ ಈಶ್ವರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಪಕ್ಷದ ವರಿಷ್ಠ ಜೆ. ಪಿ ನಡ್ಡಾ ಅವರಿಗೆ ತಮ್ಮ ರಾಜೀನಾಮೆ ಕುರಿತು ಪತ್ರ ಬರೆದಿದ್ದು, ಉನ್ನತ ಸ್ಥಾನಮಾನ ನೀಡಿದ ಹಿರಿಯರಿಗೆ ಧನ್ಯವಾದ ಸಲ್ಲಿಸಿದ್ದಾರೆ.