News Karnataka Kannada
Monday, April 29 2024
ಬೆಂಗಳೂರು

ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್‌ 4ರಿಂದ ಅಧಿವೇಶನ

Session to be held at Suvarna Soudha in Belagavi from December 4
Photo Credit : News Kannada

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4 ರಿಂದ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, ಬೆಳಗಾವಿಯಲ್ಲಿ ಡಿಸೆಂಬರ್ 4 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಬರಗಾಲದ ಬಗ್ಗೆಯೂ ವಿಸ್ತೃತ ವಾಗಿ ಚರ್ಚೆ ಮಾಡಿದ್ದೇವೆ. ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ, ಆದರೆ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಇವತ್ತಿನ ಸಭೆಯಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಖಂಡನೆ ವ್ಯಕ್ತ ಪಡಿಸಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು