News Karnataka Kannada
Tuesday, April 30 2024
ಬೆಂಗಳೂರು

ಬಿ.ವೈ ವಿಜಯೇಂದ್ರ ಸೇರಿ ಹಲವು ‘ಬಿಜೆಪಿ ನಾಯಕ’ರ ಬಂಧನ !

By V
Photo Credit : News Kannada

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ದೆಹಲಿ ಚಲೋ ಮಾಡಿದ ಕಾಂಗ್ರೆಸ್ಸಿಗರಿಗೆ ಮತದಾರರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮನೆಗೆ ಕಳಿಸುವ ಮೂಲಕ ಪಾಠ ಕಲಿಸುತ್ತಾರೆ ಎಂದುವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರಕಾರವು ಬರಗಾಲದ ಸಂದರ್ಭದಲ್ಲೂ ಸಮರ್ಪಕವಾಗಿ ವಿದ್ಯುತ್ ನೀಡಿತ್ತು. ಆದರೆ, ಕಾಂಗ್ರೆಸ್ ಸರಕಾರವು ಸರಿಯಾಗಿ ವಿದ್ಯುತ್ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ಸಂಬಂಧಿತ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು. ಸರಕಾರವು ತನ್ನ ಖಜಾನೆಯನ್ನು ಖಾಲಿ ಮಾಡಿಕೊಂಡಿದೆ. ದೆಹಲಿ ಚಲೋ ಮೂಲಕ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಅಸಮರ್ಥ ಆಡಳಿತದ ವಿರುದ್ಧ ಮುಂದಿನ ದಿನಗಳಲ್ಲಿ ಜಿಲ್ಲೆಗಳಲ್ಲೂ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು