ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.
ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಈ ಬಗ್ಗೆ ಇಂದು ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.
ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.
ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದೂ ಯಡಿಯೂರಪ್ಪ ಹೇಳಿದ್ದಾರೆ.
ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ.