ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಶಿವರಾಜ್ ಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ.
ಆದ್ರೆ, ಶಿವರಾಜ್ ಕುಮಾರ್ ಅವರು ಡಿಕೆಶಿ ಕೊಟ್ಟ ಆಫರ್ ಅನ್ನು ನಯಾವಾಗಿ ತಿರಸ್ಕರಿಸಿದ್ದಾರೆ. ನಾನು ನಟ ಮಾತ್ರ. ರಾಜಕೀಯದ ಬಗ್ಗೆ ನನಗೆ ಗೊತ್ತಿಲ್ಲ ಎಂದು ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಶಿವಣ್ಣ ಹೇಳಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ನಡೆದ ಈಡಿಗಾ ಸಮಾವೇಶದಲ್ಲಿ ಬಹಿರಂಗಪಡಿಸಿದ ಶಿವಣ್ಣ, ಲೋಕಸಸಭೆಗೆ ರೆಡಿಯಾಗಿ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಆದ್ರೆ, ನಮ್ ತಂದೆ ಕೊಟ್ಟಿರುವ ಬಳುವಳಿ ಮುಂದುವರೆಸಿಕೊಂಡು ಹೋಗಬೇಕಿದೆ. ನಮ್ಮದೇನಿದ್ದರೂ ಮೇಕಪ್ ಹಾಕುವುದು ಸಿನಿಮಾ ಮಾಡುವುದು ಎಂದು ಹೇಳಿದರು. ಈ ಮೂಲಕ ಶಿವರಾಜ್ ಕುಮಾರ್ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿದರು.
ಗೀತಾಗೆ ಆಸಕ್ತಿ ಇದ್ದರೆ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿ. ಹೆಂಡತಿ ಇಷ್ಟ ಪಟ್ಟರೆ ಅವರಿಗೆ ಸಪೋರ್ಟ್ ಮಾಡುವುದು ಗಂಡನ ಕರ್ತವ್ಯ. ಗೀತಾ ಇಷ್ಟ ಪಟ್ಟರೆ ಅದಕ್ಕೆ ಸಪೋರ್ಟ್ ಮಾಡುತ್ತೇನೆ ಎಂದರು.