ಅನ್ಯಕೋಮಿನ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಿಗ್ಗಾ ಮುಗ್ಗಾ ಹಲ್ಲೆ

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಹನುಮಾನ್‌ ಚಾಲೀಸಾ ಹಾಕಿದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆದಿತ್ತು ಈ ಬೆನ್ನಲ್ಲೆ ನಗರದ ಮತ್ತೊಂದು ಕಡೆ ಅನ್ಯಕೋಮಿ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿದೆ. ನಗರದ ಹೊರವಲಯ ಆನೇಕಲ್ ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರದಲ್ಲಿಯೂ ಅಂತಹುದೇ ಘಟನೆ ನಡೆದಿದೆ.

ಬಾಲಾಜಿ ಪ್ರಾವಿಷನ್ ಸ್ಟೋರ್ ಮಾಲೀಕ ಲಲಿತ್ ನಿನ್ನೆ ನಿಂಜಾ ಕಾರ್ಟ್ ನಲ್ಲಿ ತೆಂಗಿನಕಾಯಿ ಈರುಳ್ಳಿ ಸೇರಿದಂತೆ ತರಕಾರಿಗಳನ್ನು ಆರ್ಡರ್ ಮಾಡಿದ್ದಾನೆ. ಆದರೆ ಡೆಲಿವರಿ ಬಾಯ್‌ ತಂದ ತೆಂಗಿನಕಾಯಿಯಲ್ಲಿ 700 ಗ್ರಾಂ ವ್ಯತ್ಯಾಸವಿತ್ತು.700 ಗ್ರಾಂ ತೆಂಗಿನಕಾಯಿಗೆ 30 ರೂಪಾಯಿ ಬೆಲೆ ಇದ್ದು, ಹಾಗಾಗಿ ಅಂಗಡಿ ಮಾಲೀಕ ಅದನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ದಾಳಿ ನಡೆದಿದ್ದ ಚಾಕಲೇಟ್‌ ಡಬ್ಬ ಮತ್ತು ಪೊರಕೆಯಿಂದ ಹಲ್ಲೆ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇಷ್ಟಕ್ಕೆ ಸುಮ್ಮನಾಗದ ಡೆಲಿವರಿ ಬಾಯ್‌ ತನ್ನ ಸ್ನೇಹಿತರನ್ನು ಕರೆಸಿ, ಸಂಪೂರ್ಣ ಬಿಲ್‌ ಪಾವತಿಸುವಂತೆ ಅವಾಜ್‌ ಹಾಕಿದ್ದಲ್ಲದೆ ಅಂಗಡಿಯನ್ನು ಪುಡಿ ಪುಡಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ವೇಲೆ ಅಂಗಡಿ ಮಾಲೀಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ತಕ್ಷಣವೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಡೆಲಿವರಿ ಬಾಯ್‌ ಮತ್ತು ಆತನ ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇವರಲ್ಲಿ ಎಲ್ಲರೂ ಮುಸ್ಲಿಂ ಯುವಕರಿದ್ದು ವಿಷಯ ತಿಳಿದ ಹಿಂದೂ ಕಾರ್ಯಕರ್ತರು ಅವರಿಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಎಲೆಕ್ಟ್ರಾನ್‌ ಸಿಟಿ ಪೊಲೀಸರು ಅವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಿದ್ದಾರೆ.

 

Nisarga K

Recent Posts

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

14 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

27 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

1 hour ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

1 hour ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

2 hours ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

2 hours ago