News Karnataka Kannada
Tuesday, April 30 2024
ಬೆಂಗಳೂರು

ಕೋಲಾರ, ವರುಣಾ ಎರಡು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸ್ಪರ್ಧೆ: ಡಾ. ಯತೀಂದ್ರ ಹೇಳಿಕೆ

It is inhuman in god's eyes to take off clothes and come to temple: Siddaramaiah
Photo Credit : News Kannada

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ಮತ್ತು ವರುಣಾ ಎರಡೂ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ರ ಡಾ. ಯತೀಂದ್ರ ತಿಳಿಸಿದ್ದಾರೆ. ಹೈಕಮಾಂಡ್‌ ಕೋಲಾರ ಬೇಡ ವರುಣಾದಲ್ಲಿ ಸ್ಪರ್ಧಿಸಿ ಎಂದು ಸೂಚಿಸಿದೆ. ಆದರೆ ಈ ಸಮಯದಲ್ಲಿ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂಬುದು ಅಲ್ಲಿನ ನಾಯಕರ ಅಭಿಪ್ರಾಯ. ಈ ನಿಟ್ಟಿನಲ್ಲಿ ಕೋಲಾರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಮಾಸ್‌ ಲೀಡರ್‌: ಸಿದ್ದರಾಮಯ್ಯ ಮಾಸ್‌ ಲೀಡರ್‌ ಇದ್ದಂತೆ ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ನಿಂತರೂ ವೈರಿಗಳು ಒಂದಾಗುತ್ತಾರೆ. ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ. ಎಲ್ಲಿ ನಿಂತರೂ ಶತ್ರುಗಳು ಒಂದಾಗುತ್ತಾರೆ. ಇದಕ್ಕೆಲ್ಲ ಹೆದರುವ ವ್ಯಕ್ತಿ ಸಿದ್ದರಾಮಯ್ಯ ಅಲ್ಲ. ಸಿದ್ದರಾಮಯ್ಯ ಮಾಸ್‌ ಲೀಡರ್‌ ಅವರಿಗೆ ಅಧಿಕಾರ ದೊರೆತರೆ ಸಾಮಾಜಿಕ ನ್ಯಾಯ ಒದಗಿಸುತ್ತಾರೆ. ಹೀಗಾಗಿ ಬಲಪಂಥಿಯರು ಸಹಿಸುವುದಿಲ್ಲ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು