ಬೆಂಗಳೂರು

ಲಿಮ್ಕಾ ದಾಖಲೆ ಮಾಡಿದ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಕಳೆದ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕರ್ನಾಟಕದ ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ಅಪ್ರತಿಮ ಸಾಧನೆಗೈದ ಏಕೈಕ ಕನ್ನಡಿಗ ಹಾಗೂ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಆಯ್ಕೆಯಾಗಿ ವಿಶ್ವ ದಾಖಲೆ ನಿರ್ಮಿಸಿ ಕಳೆದ 43 ವರ್ಷಗಳಿಂದ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಹಿತ ಕಾಯುವಲ್ಲಿ ಶ್ರಮಿಸುತ್ತಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಸಂದಿದೆ.

1990ರಲ್ಲಿ ಆರಂಭಗೊಂಡ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ಸಂಸ್ಥೆ ಭಾರತೀಯರ ವಿಶ್ವ ದಾಖಲೆಗಳನ್ನು ದಾಖಲಿಸುವ ಸಂಸ್ಥೆಯಾಗಿದೆ. ಭಾರತದಲ್ಲಿ ಪ್ರಕಟವಾದ 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಐತಿಹಾಸಿಕ ದಾಖಲೆಗಳನ್ನು ದಾಖಲಿಸಿ ಪ್ರಕಟಿಸಲಾಗಿದೆ.

ಈ ಬಾರಿಯ ವಾರ್ಷಿಕ ಪುಸ್ತಕದಲ್ಲಿ ಸಿಕ್ಕಿಂ ರಾಜ್ಯದ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಅವರು 24 ವರ್ಷ 165 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವಾ ಅವಧಿ ದಿನಗಳನ್ನು ದಾಖಲಿಸಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರ 23 ವರ್ಷ 137 ದಿನಗಳ ಕಾಲ ಮುಖ್ಯಮಂತ್ರಿ ಅವಧಿಯನ್ನು ದಾಖಲಿಸಲಾಗಿದೆ.

ಸಭಾಪತಿ ಬಸವರಾಜ ಹೊರಟ್ಟಿ ಅವರು 1980 ರಿಂದ ಸ್ಪರ್ಧಿಸಿದ ಎಲ್ಲ ಚುನಾವಣೆಗಳಲ್ಲಿ ಜಯಗಳಿಸಿದ ಅಂಕಿ ಸಂಖ್ಯೆಗಳು ಹಾಗೂ ಇನ್ನಿತರ ಮಾಹಿತಿಯನ್ನು ನೋಡುವುದಾದರೆ, ಬಸವರಾಜ ಹೊರಟ್ಟಿಯವರು ಇಲ್ಲಿಯವರೆಗೆ ಎಂಟು ಬಾರಿ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಐತಿಹಾಸಿಕ ದಾಖಲೆಗೆ ಪಾತ್ರರಾಗಿದ್ದಾರೆ.

ಅವರು ವಿಧಾನ ಪರಿಷತ್ ಪ್ರವೇಶಿಸಿ ಇಂದಿಗೆ 43 ವರ್ಷ 201 ದಿನಗಳಾದವು. ಭಾರತ ದೇಶದ ಇತಿಹಾಸದಲ್ಲಿಯೇ ಐತಿಹಾಸಿಕ ದಾಖಲೆ. ಇಂತಹದೊಂದು ಸುದೀರ್ಘ ಚುನಾವಣಾ ಅವಧಿಯ ರಾಜಕಾರಣವನ್ನು ಮತ್ತೊಬ್ಬರು ದೇಶದ ಇತಿಹಾಸದಲ್ಲಿ ಮಾಡಿಲ್ಲ. ಇಂತಹ ದಾಖಲೆಯನ್ನು ಹಿಂದೆಯೂ ಯಾರು ಮಾಡಿಲ್ಲ ಬಹುಶ: ಮುಂದೆಯೂ ಯಾರು ಮಾಡಲು ಸಾಧ್ಯವಿಲ್ಲ ಎನಿಸುತ್ತದೆ.

ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಹಲವಾರು ದಾಖಲೆಗಳಲ್ಲಿ ನಮೂದಾಗಿದ್ದು, ಪ್ರಮುಖವಾಗಿ ಈಗಾಗಲೇ ಲಂಡನ್ನಿನ ವಲ್ರ್ಡ್ ಬುಕ್ ಆಫ್ ದಾಖಲೆ ಗರಿ 2022 ರಲ್ಲಿ ದೊರಕಿದೆ. ಭಾರತದ ಚುನಾವಣಾ ಆಯೋಗದಲ್ಲಿ ಇವರ ಸುದೀರ್ಘ ಸೇವಾ ಅವಧಿಯ ದಾಖಲೆಗಳು ಅಂಕಿ ಸಂಖ್ಯಾ ಇಲಾಖೆಯಲ್ಲಿ ದಾಖಲಿಕರಣಗೊಂಡು ಗೆಜೆಟ್‍ನಲ್ಲಿ ಪ್ರಕಟವಾಗಿವೆ.

ಶಿಕ್ಷಕರೊಬ್ಬರು ಶಿಕ್ಷಕರ ಪ್ರತಿನಿಧಿಯಾಗಿ ಹಲವಾರು ಖಾತೆಗಳ ಸಚಿವರಾಗಿ ಮೂರನೇ ಬಾರಿ ಸಭಾಪತಿಗಳಾಗಿ ಸೇವೆ ಸುತ್ತಿರುವುದು ಇತಿಹಾಸ. ಬಸವರಾಜ ಹೊರಟ್ಟಿ ಅವರು ನಾಡಿನ ಶಿಕ್ಷಕ ಸಮೂಹದ ಸ್ವಾಭಿಮಾನದ ಸಂಕೇತ. ಇವರ ಸಾಧನೆಯನ್ನು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಪ್ರಕಟಿಸಿದ್ದು ಅವರ ಹಲವಾರು ಹಿತೈಷಿಗಳಿಗೆ, ಅಭಿಮಾನಿಗಳಿಗೆ ಹಾಗೂ ಶಿಕ್ಷಕರ ಸಮೂಹಕ್ಕೆ ಹರ್ಷ ತಂದಿದೆ.

Ashika S

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

13 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

45 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

1 hour ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago