ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್ಟೇಬಲ್ ದುರಂತ ಅಂತ್ಯ ಕಂಡಿದ್ದಾರೆ.
ಜುಲೈ 02ರ ರಾತ್ರಿ ನೈಟ್ ರೌಂಡ್ಸ್ನಲ್ಲಿದ್ದ ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೆಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್ಟೇಬಲ್ ಸುರೇಶ್, ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದಾರೆ. ಆ ವೇಳೆ ಇನ್ನೊಂದು ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದ ಕಾನ್ಸ್ಟೇಬಲ್ ಸುರೇಶ್ ಮೃತಪಟ್ಟಿದ್ದು, ಅದೃಷ್ಟವಶಾತ್ ಇನ್ಸ್ಪೆಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಸೆಂಟ್ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದು, ಪಾರ್ಟಿ ಮಾಡಿಕೊಂಡು ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರಿನ ಚಾಲಕನನ್ನು ವಿಚಾರಿಸಲು ಹೋಗಿದ್ದ ಕಾನ್ಸ್ಟೇಬಲ್ ಸುರೇಶ್ ಮೃತಪಟ್ಟಿದ್ದು, ಅಸೆಂಟ್ ಕಾರಿನ ಚಾಲಕನ ಕೈ ಕಾಲು ಮುರಿದಿವೆ. ಇನ್ನು ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿಯರಿಗೂ ಸಹ ಗಂಭೀರ ಗಾಯಗಳವಾಗಿವೆ ಎಂದು ತಿಳಿದುಬಂದಿದೆ.