ಬೆಂಗಳೂರು: ಅಯೋಧ್ಯೆಯಲ್ಲಿ ನಡೆದ ರಾಮ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಮಾಡುವುದನ್ನು ನೋಡುತ್ತಾ ಕೂರಲು ಸಾಧ್ಯವಿಲ್ಲ ಎಂದು ನಟಿ ಶೃತಿ ಹರಿಹರನ್ ಹೇಳಿದ್ದಾರೆ.
ಧರ್ಮದ ವಿಷಯದಲ್ಲಿ ರಾಜಕೀಯ ನಡೆಯುತ್ತಿರುವ ಈ ಸಂದರ್ಭದಲ್ಲಿ ದೇಶದ ಸಂವಿಧಾನವನ್ನು ನೆನಪಿಸಿಕೊಳ್ಳುವುದು ಮುಖ್ಯ ಎನ್ನುತ್ತ ಭಾರತದ ಸಂವಿಧಾನದ ಪೀಠಿಕೆಯನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ʼಧರ್ಮದ ವಿಷಯದಲ್ಲಿ ದೇಶವು ತಟಸ್ಥವಾಗಿರಬೇಕು. ಜೊತೆಗೆ ಯಾವುದೇ ಧರ್ಮವನ್ನು ಪೋಷಿಸುವುದು ಅಥವ ದ್ವೇಷಿಸುವುದು ಸರಿಯಲ್ಲ ಎಂದು ಸಂವಿಧಾನವೇ ಹೇಳಿದೆ. ಆದರೆ ಇಂದು ಧರ್ಮವನ್ನು ರಾಜಕೀಯಗೊಳಿಸುತ್ತಿರುವುದನ್ನು ನೋಡಿಕೊಂಡು ಕೂರಲಾಗದುʼ ಎಂದು ಬರೆದುಕೊಂಡಿದ್ದಾರೆ.
ಎರಡನೆಯದಾಗಿ, ಜೈ ಶ್ರೀ ರಾಮ್ ಎನ್ನುವುದರಲ್ಲಿ ಯಾವುದೇ ತಪ್ಪಿಲ್ಲ. ನಮ್ಮೊಳಗಿನ ರಾಮನನ್ನು ನಾವು ಹುಡುಕಿಕೊಳ್ಳಬೇಕು ಎಂಬುದನ್ನು ಸೂಚಿಸಲು ಹನುಮಂತ ತನ್ನ ಎದೆ ಸೀಳಿದನೆಂದು ರಾಮಾಯಣದಲ್ಲಿ ಬರೆಯಲಾಗಿರಬಹುದು ಎಂದರು.
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…