News Karnataka Kannada
Thursday, May 09 2024
ಬೆಂಗಳೂರು

ಸಿಲಿಕಾನ್ ಸಿಟಿಯಲ್ಲಿ ತಲೆ ಎತ್ತಿದೆ ರಾಮನ ಮೂರ್ತಿ

ಅಯೋಧ್ಯೆಯಲ್ಲಿ  ರಾಮಲಲ್ಲಾನ  ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ಬೃಹತ್ ರಾಮನ ಮೂರ್ತಿ ಜನರನ್ನ ಆಕರ್ಷಿಸುತ್ತಿದೆ.
Photo Credit : News Kannada

ಬೆಂಗಳೂರು: ಅಯೋಧ್ಯೆಯಲ್ಲಿ  ರಾಮಲಲ್ಲಾನ  ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ಬೃಹತ್ ರಾಮನ ಮೂರ್ತಿ ಜನರನ್ನ ಆಕರ್ಷಿಸುತ್ತಿದೆ.

ಸಿಲಿಕಾನ್ ಸಿಟಿಯ ಹೃದಯ ಭಾಗದಲ್ಲಿ 15 ಅಡಿಯ ಬೃಹತ್ ರಾಮನ ಫೈಬರ್ ಮೂರ್ತಿ ತಲೆ ಎತ್ತಿದೆ. ಬೃಹತ್ ರಾಮನ ವಿಗ್ರಹ ನೋಡಿದ ಜನ ಭಕ್ತಿಯಿಂದ ರಾಮನಿಗೆ ವಂದಿಸಿ, ಪೋಟೋ ತೆಗೆದುಕೊಂಡು ಹೋಗುತ್ತಿದ್ದಾರೆ.

ನೀಲಾಕಾರನಾಗಿ ಕಲಾವಿದರ ಕೈಯಲ್ಲಿ ಮೂಡಿರುವ ರಾಮನ ಮೂರ್ತಿ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿರುವ ಆಂಜನೇಯ ದೇವಾಲಯದ ಹೊರಗೆ ಬರುವ ಜನರಿಗೆ ದರ್ಶನ ನೀಡುತ್ತಿದ್ದಾನೆ.  ನಗರದ ಕೇಂದ್ರಭಾಗದಲ್ಲಿ ನೆಲೆಸಿರುವ ಈ ರಾಮನ ವಿಗ್ರಹ ಜನವರಿ 23 ರವರೆಗೆ ಇರಲಿದ್ದು, ಬರುವ ಭಕ್ತರು ದರ್ಶನ ಪಡೆಯಬಹುದಾಗಿದೆ.

ಇನ್ನು ಬೆಂಗಳೂರಿನ ನಾನಾ ಭಾಗಗಳಲ್ಲೂ ಇಂತಹದ್ದೇ ಮೂರ್ತಿ ಪ್ರತಿಷ್ಠಾಪಿಸಲು ತಯಾರಿ ಕೂಡ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು