ಬೆಂಗಳೂರು: ಪ್ರತಿಷ್ಠಿತ ಹೋಟೆಲ್ಗಳನ್ನೇ ಟಾರ್ಗೆಟ್ ಮಾಡಿ ತನಗೆ ವಯಸ್ಸಾಗಿದೆ, ಆರ್ಥಿಕ ಸಂಕಷ್ಟದ ನೆಪವೊಡ್ಡಿ ಸಿಂಪತಿ ಗಿಟ್ಟಿಸಿ ಹೋಟೆಲ್ನಲ್ಲಿ ಕೆಲಸ ಪಡೆದು. ಬಳಿಕ ಹೋಟೆಲ್ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಲೇ ಹೊಂಚುಹಾಕಿ ಹಣ ಎಗರಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬನಶಂಕರಿ ನಿವಾಸಿ ಎಂ.ಎಸ್.ರವಿಕುಮಾರ್ ಬಂಧಿತ ಆರೋಪಿ. ಪ್ರತಿಷ್ಠಿತ ಹೋಟೆಲ್ಗಳನ್ನೇ ಟಾರ್ಗೆಟ್ ಮಾಡಿ ಹಣ ಕದಿಯುತ್ತಿದ್ದ.
ಆರೋಪಿ ರವಿಕುಮಾರ್, ಕಳೆದ ವರ್ಷ ಫೆ.19ರಂದು ಕೆ.ಆರ್.ಪುರದ ಭಟ್ಟರಹಳ್ಳಿಯ ಹೋಟೆಲ್ನಲ್ಲಿ ಹಣ ಕಳವು ಮಾಡಿದ್ದ. ಹೋಟೆಲ್ನ ಕ್ಯಾಷ್ಕೌಂಟರ್ನಲ್ಲಿದ್ದ 1 ಲಕ್ಷ ಹಣ ಕದ್ದಿದ್ದ. ಸತೀಶ್ ಶೆಟ್ಟಿ ಎಂಬುವರ ಹೋಟೆಲ್ನಲ್ಲಿ ಹಣ ಕದ್ದು ಪರಾರಿಯಾಗಿದ್ದ.
ಇದಾದ ಬಳಿಕ ಇತ್ತೀಚೆಗೆ ದೇವನಹಳ್ಳಿ ಬಳಿ ಹೋಟೆಲ್ನಲ್ಲಿ ಕೆಲಸ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಹಣ ಕಳೆದುಕೊಂಡಿದ್ದ ಮಾಲೀಕ ಸತೀಶ್ ಶೆಟ್ಟಿಯಿಂದಲೇ ಆರೋಪಿ ಲಾಕ್ ಆಗಿದ್ದಾನೆ. ಸತೀಶ್ ಶೆಟ್ಟಿ ಅವರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಕ್ಯಾಷ್ ಕೌಂಟರ್ನಲ್ಲಿ ಕುಳಿತೇ ಹಣವನ್ನು ಪ್ಯಾಂಟ್ ಜೇಬಿಗಿಳಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ.
ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.