News Karnataka Kannada
Monday, April 29 2024
ಬೆಂಗಳೂರು

ಗೀತಂ ವಿಶ್ವವಿದ್ಯಾಲಯ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

Died
Photo Credit : News Kannada

ದೇವನಹಳ್ಳಿ: ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಎಂಬ ವಿದ್ಯಾರ್ಥಿ ನಿನ್ನೆ ರಾತ್ರಿ ಊಟ ಮಾಡಿದ ಬಳಿಕ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡುತ್ತಿದ್ದ ದಾಸರಿ ಬ್ರಹ್ಮಸಾಯಿರೆಡ್ಡಿ, ರಾತ್ರಿ ಊಟ ಮಾಡಿ ತನ್ನ ಕೋಣೆಗೆ ಮರಳಿದ್ದ. ಈ ವೇಳೆ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.

ಕಳೆದ ನಾಲ್ಕು ತಿಂಗಳಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿಯು ಓರ್ವ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ನವೆಂಬರ್​ನಲ್ಲಿ ನೇಣು ಬಿಗಿದುಕೊಂಡು ಓರ್ವ ವಿದೇಶಿ‌ ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಕಳೆದ ಪೆಬ್ರವರಿ 06 ರಂದು ರೈಲಿಗೆ ಸಿಲುಕಿ ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ ಇದೀಗ ಹಾಸ್ಟೆಲ್ ಮಹಡಿ ಮೇಲಿಂದ ಬಿದ್ದು ಆಂಧ್ರ ಮೂಲದ ಮತ್ತೋರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಪ್ರತಿಷ್ಠಿತ ಗೀತಂ ವಿವಿಯಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು