ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಶಂಕಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೋರಟಿದ್ದ ವೇಳೆ‌ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ.