News Karnataka Kannada
Saturday, April 27 2024
ಬೆಂಗಳೂರು

ತೆಲಂಗಾಣ ಕಾಂಗ್ರೆಸ್‌ ಶಾಸಕರು ಹೈದರಾಬಾದ್‌ಗೆ ಶಿಫ್ಟ್

Telangana Congress MLAs shifted to Hyderabad
Photo Credit : News Kannada

ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಇತರ ಪಕ್ಷದ ಶಾಸಕರು ಸೆಳೆಯದಂತೆ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ.

ಶಿವಕುಮಾರ್ ಅವರು ಈಗಾಗಲೇ ಹೈದರಾಬಾದ್​ ತಲುಪಿದ್ದಾರೆ. ಅವರ ಜತೆ ಕರ್ನಾಟಕದ ಇತರ ಕೆಲವು ಸಚಿವರೂ ಇದ್ದಾರೆ. ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನ ಹೊರಗೆ ಬಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಕಾಂಗ್ರೆಸ್​ನ ನೂತನ ಶಾಸಕರಾಗಿ ಆಯ್ಕೆಯಾಗುವವರನ್ನು ಕರೆದೊಯ್ಯಲೆಂದೇ ಈ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಈ ಹಂತದಲ್ಲಿ ಕಾಂಗ್ರೆಸ್‌ ತನ್ನೆಲ್ಲ ಸಂಭಾವ್ಯ ಶಾಸಕರನ್ನು ಹೈದರಾಬಾದ್‌ ಗೆ ಕರೆಸಿಕೊಳ್ಳಲಾಗಿದೆ. ಒಂದು ವೇಳೆ ಇನ್ನು ಫಲಿತಾಂಶದಲ್ಲಿ ಏನಾದರೂ ಏರುಪೇರು ಉಂಟಾದರೆ ಪರಿಸ್ಥಿತಿಯನ್ನು ಎದುರಿಸಲು ಈ ತಂತ್ರಗಾರಿಕೆ ಮಾಡಲಾಗಿದೆ. ಗೆಲುವು ಸನಿಹದಲ್ಲೇ ಇದ್ದರೂ ನಿರ್ಲಕ್ಷ್ಯ ಮಾಡುವುದು ಬೇಡ ಎಂಬ ಕಾರಣಕ್ಕಾಗಿ ಎಲ್ಲರನ್ನು ಒಂದೇ ಕಡೆ ಸೇರಿಸುವ ಪ್ಲ್ಯಾನ್‌ ಮಾಡಲಾಗಿದೆ.

ಅತಂತ್ರ ಪರಿಸ್ಥಿತಿ ಅಥವಾ ಸರಳ ಬಹುಮತ ಬಂದರೆ ಚೆಸ್ ಗೇಮ್ ಆಡಲು ಕಳುಹಿಸಿಕೊಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವ ಕರ್ನಾಟಕ ಕಾಂಗ್ರೆಸ್ ಟೀಮ್ ಸಜ್ಜಾಗಿ ನಿಂತಿದೆ. ಒಂದು ವೇಳೆ ಅವಶ್ಯ ಬಿದ್ದರೆ ಕಾಂಗ್ರೆಸ್‌ ನ ಎಲ್ಲ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಲು ಮೂರು ಬಸ್‌ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು