ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಕಾಂಗ್ರೆಸ್ ಪಕ್ಷದ ಶಾಸಕರನ್ನು ಇತರ ಪಕ್ಷದ ಶಾಸಕರು ಸೆಳೆಯದಂತೆ ಕಾಂಗ್ರೆಸ್ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ.
ಶಿವಕುಮಾರ್ ಅವರು ಈಗಾಗಲೇ ಹೈದರಾಬಾದ್ ತಲುಪಿದ್ದಾರೆ. ಅವರ ಜತೆ ಕರ್ನಾಟಕದ ಇತರ ಕೆಲವು ಸಚಿವರೂ ಇದ್ದಾರೆ. ಹೈದರಾಬಾದ್ನ ತಾಜ್ ಕೃಷ್ಣ ಹೋಟೆಲ್ನ ಹೊರಗೆ ಬಸ್ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಕಾಂಗ್ರೆಸ್ನ ನೂತನ ಶಾಸಕರಾಗಿ ಆಯ್ಕೆಯಾಗುವವರನ್ನು ಕರೆದೊಯ್ಯಲೆಂದೇ ಈ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಈ ಹಂತದಲ್ಲಿ ಕಾಂಗ್ರೆಸ್ ತನ್ನೆಲ್ಲ ಸಂಭಾವ್ಯ ಶಾಸಕರನ್ನು ಹೈದರಾಬಾದ್ ಗೆ ಕರೆಸಿಕೊಳ್ಳಲಾಗಿದೆ. ಒಂದು ವೇಳೆ ಇನ್ನು ಫಲಿತಾಂಶದಲ್ಲಿ ಏನಾದರೂ ಏರುಪೇರು ಉಂಟಾದರೆ ಪರಿಸ್ಥಿತಿಯನ್ನು ಎದುರಿಸಲು ಈ ತಂತ್ರಗಾರಿಕೆ ಮಾಡಲಾಗಿದೆ. ಗೆಲುವು ಸನಿಹದಲ್ಲೇ ಇದ್ದರೂ ನಿರ್ಲಕ್ಷ್ಯ ಮಾಡುವುದು ಬೇಡ ಎಂಬ ಕಾರಣಕ್ಕಾಗಿ ಎಲ್ಲರನ್ನು ಒಂದೇ ಕಡೆ ಸೇರಿಸುವ ಪ್ಲ್ಯಾನ್ ಮಾಡಲಾಗಿದೆ.
ಅತಂತ್ರ ಪರಿಸ್ಥಿತಿ ಅಥವಾ ಸರಳ ಬಹುಮತ ಬಂದರೆ ಚೆಸ್ ಗೇಮ್ ಆಡಲು ಕಳುಹಿಸಿಕೊಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವ ಕರ್ನಾಟಕ ಕಾಂಗ್ರೆಸ್ ಟೀಮ್ ಸಜ್ಜಾಗಿ ನಿಂತಿದೆ. ಒಂದು ವೇಳೆ ಅವಶ್ಯ ಬಿದ್ದರೆ ಕಾಂಗ್ರೆಸ್ ನ ಎಲ್ಲ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲು ಮೂರು ಬಸ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…