News Karnataka Kannada
Friday, May 17 2024
ಬೆಂಗಳೂರು

28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ: ಬಿ.ವೈ.ವಿಜಯೇಂದ್ರ

ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಹೇಳಿದ್ದಾರೆ.
Photo Credit : News Kannada

ಬೆಂಗಳೂರು: ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಹೇಳಿದ್ದಾರೆ.

ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಸರ್ಕಾರ ಬೇಕೆಂಬ ತೀರ್ಮಾನಕ್ಕೆ ಜನರು ಬಂದಿದ್ದಾರೆ ಎಂದರು.

28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಅಭ್ಯರ್ಥಿಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಇವತ್ತು, ನಾಳೆಯೊಳಗೆ ಎಲ್ಲವೂ ಅಂತಿಮವಾಗಲಿದೆ. 22, 23, 24 ಕ್ಷೇತ್ರ ಗೆಲುವಿನ ಪ್ರಶ್ನೆ ಅಲ್ಲ. ಹೊಸ ಇತಿಹಾಸವನ್ನು ಬಿಜೆಪಿ ರಾಜ್ಯದಲ್ಲಿ ಸೃಷ್ಟಿಸಲಿದೆ ಎಂದು ರಾಜ್ಯಾಧ್ಯಕ್ಷನಾಗಿ ವಿಶ್ವಾಸ ಹೊಂದಿದ್ದೇನೆ. ಹಿಂದೆ ಬಾರದಂಥ ಅತ್ಯುತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ಅವರು ಹೇಳಿದರು.

ಅಭ್ಯರ್ಥಿಗಳ ವಿಚಾರ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಮೂರ್ನಾಲ್ಕು ದಿನಗಳಲ್ಲಿ ಎಲ್ಲಾ ವಿವರ ಲಭಿಸಲಿದೆ. ಬಹುತೇಕ 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಎಲ್ಲರ ಪ್ರಶ್ನೆಗಳಿಗೆ ಮೂರ್ನಾಲ್ಕು ದಿನಗಳಲ್ಲಿ ಉತ್ತರ ಲಭಿಸಲಿದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು