ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಪಿತೂರಿ ನಡೆಯುತ್ತಿದೆ

ಬೆಂಗಳೂರು: ನನ್ನ ಮೇಲೆ ದೌರ್ಜನ್ಯ ನಡೆಸಿ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಅಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ದೊಡ್ಡ ದೊಡ್ಡವರಿದ್ದಾರೆ, ದೊಡ್ಡ ಪಿತೂರಿ ನಡೆಯುತ್ತಿದೆ, ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅವರೊಬ್ಬರಿಗೆ ನೋಟಿಸ್ ಕೊಟ್ಟಿಲ್ಲ ಹಾಪ್ ಕಾಮ್ಸ್ ಸಬ್ ರಿಜಿಸ್ಟರ್ ಎಲ್ಲರಿಗೂ ಕೊಟ್ಟಿದೆ. ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ. ಆದರೂ ಯಾವ ಲೆಕ್ಕಾಚಾರದಲ್ಲಿ ಕೊಟ್ಟಿದ್ದಾರೆ ಗೊತ್ತಿಲ್ಲ. ನನಗೆ ನೊಟೀಸ್ ಬಂದಿಲ್ಲ, ನನ್ನ ಸಂಸ್ಥೆಗೆ ಬಂದಿದೆ. ಹೆಂಡತಿ, ಮಕ್ಕಳ ವಿಚಾರಕ್ಕೆಲ್ಲಾ ಬಂದಿದೆ. ಆಮೇಲೆ ವೈಯಕ್ತಿಕವಾಗಿ ನನ್ನ ಬಳಿ ಬರುತ್ತಾರೆ. ಅವರಿಗೆ ಒಳಗೆ ಹಾಕುವ ಆಸಕ್ತಿ ಇದ್ದರೆ ಹಾಕಿಕೊಳ್ಳಲಿ ಎಂದರು.

ನಾನು ಏನು ತಪ್ಪು ಮಾಡಿಲ್ಲ ನಾನು ಹೆದರಲ್ಲ. ಸರ್ಕಾರ ಇದನ್ನ ಈಗಾಗಲೇ ಲೋಕಾಯುಕ್ತಕ್ಕೆ ಕೊಟ್ಟಿದೆ. ಮುಂದಿನ ಪ್ರೊಸೀಜರ್ ಲೋಕಾಯುಕ್ತ ನೋಡಿಕೊಳ್ಳುತ್ತದೆ ತನಿಖೆ ನಡೆಸುತ್ತೆ ಎಂದು ಹೇಳಿದರು.

10 ರಂದು ಶಾಸಕರು ಪದಾಧಿಕಾರಿಗಳ ಜೊತೆ ಸಭೆ ಇದೆ. ಆ ಸಭೆಯಲ್ಲಿ ಸಿಎಂ ಕೂಡ ಭಾಗಿಯಾಗುತ್ತಾರೆ. ಸಚಿವರುಗಳಿಗೆ ಜವಾಬ್ದಾರಿ ಕೊಟ್ಟಿದ್ದೇವೆ ಅವರು ರಿಪೋರ್ಟ್ ಕೊಡುತ್ತಾರೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಕೆಲವು ಸಚಿವರು ಸ್ಪರ್ಧೆ ಮಾಡುವ ಸಂದರ್ಭ ಬರಬಹುದು ನೋಡೋಣ ಪಕ್ಷ ಏನ ತೀರ್ಮಾನ ಮಾಡುತ್ತೆ ನೋಡೋಣ ಎಂದರು.

ಇದೇ ವೇಳೆ ಲೋಕಸಭೆಗೆ ಸಚಿವರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ,ಸ್ಪರ್ಧೆ ಮಾಡುತ್ತಾರೆ ಅನ್ನೋದೆಲ್ಲಾ ಸುಳ್ಳು. ನಾನಿನ್ನು ವರದಿಯನ್ನೇ ಕೊಟ್ಟಿಲ್ಲ. ನಾಲ್ಕರಂದು ದೆಹಲಿಯಲ್ಲಿ ಮೀಟಿಂಗ್ ಇದೆ. ಎಲ್ಲಾ ಉಸ್ತುವಾರಿ ಸಚಿವರು ರಿಪೋರ್ಟ್ ಕೊಟ್ಟಿದ್ದಾರೆ. ನನ್ನ ಸಿಎಂ ಅವರನ್ನ ಹೈಕಮಾಂಡ್ ಕರೆದಿದ್ದಾರೆ. ನಾವು ಹೋಗ್ತಾ ಇದ್ದೇವೆ ಅಲ್ಲಿ ಗೈಡ್ ಲೈನ್ಸ್ ಮಾಡೋದನ್ನ ನಾವು ಫಾಲೋ ಮಾಡಿದ್ದೇವೆ. ನಾವು ಯಾವ ಸಚಿವರ ಬಳಿ ಮಾತಾಡಿಲ್ಲ ಎಂದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago