ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆಯಲು ಸಂಪುಟ ಅನುಮೋದನೆ ನೀಡಿದ ಕುರಿತು ಈ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದರೋಡೆಕೋರರನ್ನು ರಕ್ಷಣೆ ಮಾಡುವುದಕ್ಕೇ ಈ ಸರ್ಕಾರ ಇದೆ ಎಂದು ಟೀಕಿಸಿದರು.
ಮರ್ಯಾದೆ ಇರುವವರು ಹೆದರುತ್ತಾರೆ. ಮರ್ಯಾದೆ ಇಲ್ಲದವರಿಗೆ ಕೋರ್ಟ್ನಲ್ಲಿ ಇದ್ದರೇನು? ಯಾವುದಲ್ಲಿದ್ದರೆ ಏನು? ಯಾವುದನ್ನು ಬೇಕಾದರೂ ಕೊಂಡುಕೊಳ್ಳುತ್ತೇವೆ ಎನ್ನುವ ದುರಹಂಕಾರದಲ್ಲಿರುತ್ತಾರೆ. ಅಂತಹವರಿಗೆ ಏನು ಹೇಳುವುದು ಎಂದರು.
ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಯ ಬಗ್ಗೆ ಬಹಳ ಮಾತನಾಡುವುದು ಇದೆ. ಚರ್ಚೆ ಮಾಡೋಣ, ಆ ಬಗ್ಗೆ ಆತುರ ಬೇಡ ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.