News Karnataka Kannada
Sunday, May 05 2024
ಬೆಂಗಳೂರು

ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ತರಲು ಕೆರೆಗಿಳಿದವರ ದುರಂತ ಅಂತ್ಯ

Those who went to the lake to get lotus flowers for varamahalakshmi festival end in tragedy
Photo Credit : News Kannada

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆಂದು (ಆಗಸ್ಟ್‌ 25) ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಅಂತ್ಯ ಕಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾದ ಪುಟ್ಟರಾಜು(42), ಮಗ ಕೇಶವ(14) ಮೃತ ದುರ್ದೈವಿಗಳು.

ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಪ್ಲಾನ್​ ಮಾಡಿದ್ದರು. ಹೀಗಾಗಿ ಹೂ ತರಲು ಭೂಚನಹಳ್ಳಿ ಕೆರೆಗೆ ಹೋಗಿದ್ದಾರೆ. ಮೊದಲು ಹೂ ಕೀಳಲು ಪುತ್ರ ಕೇಶವ ಕೆರೆಗೆ ಇಳಿದಿದ್ದಾನೆ. ಆದ್ರೆ, ಏಕಾಏಕಿ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ತಂದೆ ಪುಟ್ಟರಾಜು ಸಹ ಪುತ್ರನನ್ನು ರಕ್ಷಿಸಲು ನೀರಿಗಿಳಿದಿದ್ದಾರೆ. ಆದ್ರೆ, ದುರದೃಷ್ಟವಶಾತ್​ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು