Bengaluru 27°C

ಟಿಪ್ಪರ್ ಡಿಕ್ಕಿ, ಗರ್ಭಿಣಿ ಸಾವು; ಹೊಟ್ಟೆಯಿಂದ ಹೊರಬಂದ ಮಗು!

ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ನೆಲಮಂಗಲ: ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.


ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಗಡೆ ಬಂದು ವಿಲ ವಿಲ ಒದ್ದಾಡಿ ಸಾವನ್ನಪ್ಪಿದೆ. ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ​ಪಾರಾಗಿದ್ದಾರೆ.


ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಆರು ತಿಂಗಳಲ್ಲಿ ನೆಲಮಂಗಲ ಸಂಚಾರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತ ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.


Nk Channel Final 21 09 2023