Bengaluru 23°C
Ad

ಇಂದು ಬಕ್ರಿದ್ ಹಬ್ಬ; ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದು ಭಾಗಿ

Cm (1)

ಬೆಂಗಳೂರು: ಬಕ್ರೀದ್ ಹಬ್ಬ ಇಸ್ಲಾಂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಇಂದು ತ್ಯಾಗ ಬಲಿದಾನಗಳ ಸಂಕೇತ ಬಕ್ರಿದ್ ಹಬ್ಬ ಹಿನ್ನಲೆಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಮುಸ್ಲಿಂ ಬಾಂಧವರಿಗೆ ಬಕ್ರಿದ್ ಶುಭಾಶಯ ಕೋರಲಿರುವ ಸಿಎಂ ಪ್ರಾರ್ಥನೆ ಸಲ್ಲಿಸಿದ ನಂತರ ಸಚಿವ ಜಮೀರ್ ಅಹಮ್ಮದ್ ನಿವಾಸದಲ್ಲಿ ಉಪಹಾರ ಸೇವಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಸಚಿವರು, ಪ್ರಮುಖರು ಸಾಥ್ ನೀಡಲಿದ್ದಾರೆ.

Ad
Ad
Nk Channel Final 21 09 2023
Ad