19 ಕೋಟಿ ರೂಪಾಯಿ ದಂಡ ವಸೂಲಿ ಮಾಡಲು ಮುಂದಾದ ಟ್ರಾಫಿಕ್​ ಪೊಲೀಸರು

ಬೆಂಗಳೂರು: ಬೆಂಗಳೂರು ನಗರ ಸಂಚಾರಿ ಪೊಲೀಸರು ತಮ್ಮ ಇಲಾಖೆ​ಗೆ ಬರಬೇಕಿದ್ದ 19 ಕೋಟಿ ಹಣಕ್ಕಾಗಿ ಮೆಗಾ ಆಪರೇಷನ್ ಕೈಗೊಳ್ಳಲು ಮುಂದಾಗಿದ್ದಾರೆ.

ನಗರದಲ್ಲಿರುವ 3,71,516 ವಾಹನಗಳ‌ ಮೇಲೆ ಬರೋಬ್ಬರಿ 19,54,16,400 ರೂಪಾಯಿ ದಂಡ ಇದೆ. ಈ 19 ಕೋಟಿ ರೂಪಾಯಿ ದಂಡವನ್ನ ವಸೂಲಿ ಮಾಡಲು ಮುಂದಾಗಿರುವ ಸಂಚಾರಿ ಪೊಲೀಸರು 1 ಲಕ್ಷ ರೂಪಾಯಿಗೂ ಅಧಿಕ ದಂಡ ಇರುವ 123 ವಾಹನಗಳ ಪಟ್ಟಿ ತಯಾರಿಸಿ, ವಾಹನಗಳ ಮಾಲೀಕರಿಗೆ ನೋಟಿಸ್ ಕೊಟ್ಟು ದಂಡ ವಸೂಲಿ ಮಾಡಲು ಮುಂದಾಗಿದ್ದಾರೆ.

ಇದರ ಹೊರತಾಗಿಯೂ ದಂಡ ಕಟ್ಟದಿದ್ದರೆ, ಅಂತವರ ವಿರುದ್ಧ ಕೋರ್ಟ್​ನಲ್ಲಿ ಚಾರ್ಜ್​ ಶೀಟ್ ಹಾಕಲು ಸಿದ್ದವಾಗಿದ್ದಾರೆ.

ಯಾವ್ಯಾವ ವಾಹನದ ಮೇಲೆ ಎಷ್ಟು ದಂಡ?: 2742 ಬೈಕ್​ಗಳು ​3,61,294 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದು, ಇದರ ಮೇಲೆ 18,76,34,300 ರೂ. ದಂಡ ಇದೆ. 100 ಕಾರುಗಳು 8603 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ 69,00,900 ರೂ. ದಂಡ ಕಟ್ಟಬೇಕಾಗಿದೆ.

09 ವ್ಯಾನ್ 848 ಬಾರಿ ಟ್ರಾಫಿಕ್ಸ್​ ರೂಲ್ಸ್ ಬ್ರೇಕ್ ಮಾಡಿದ್ದರಿಂದ 4,67,500 ದಂಡ ಕಟ್ಟಬೇಕಾಗಿದೆ. 2 ಸ್ಕೂಲ್ ಬಸ್ ಗಳು 156 ಸಂಚಾರಿ ನಿಯಮ ಗಾಳಿಗೆ ತೂರಿದ್ದರಿಂದ 88,000, ರೂ. 01 ಮ್ಯಾಕ್ಸಿ ಕ್ಯಾಬ್ 82 ಬಾರಿ ಟ್ರಾಫಿಕ್ ರೂಲ್ಸ್​ ಬ್ರೇಕ್ ಮಾಡಿದ್ದರಿಂದ 56,000 ರೂ. ದಂಡ ಕಟ್ಟಬೇಕಾಗಿದೆ. ಅಲ್ಲದೆ ಇತರೆ 04 ವಾಹನಗಳು 433 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದು, 2,43,100 ರೂಪಾಯಿ ದಂಡ ಕಟ್ಟಬೇಕಿವೆ.

Ashika S

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

21 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

34 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

54 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

1 hour ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago