ಬೆಂಗಳೂರು: ಬೆಂಗಳೂರಿನಲ್ಲಿ ಕ್ರಿಸ್ ಮಸ್ ದಿನದಂದೇ ಘೋರ ದುರಂತವೊಂದು ನಡೆದು ಹೋಗಿದೆ. ಕಟ್ಟಡ ನಿರ್ಮಾಣಕ್ಕೆ ಮಣ್ಣನ್ನು ಅಗೆಯುವಾಗ ಪಕ್ಕದ ಗೋಡೆಯ ಮಣ್ಣು ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ.
ಸದ್ದುಗುಂಟೆ ಪಾಳ್ಯದಲ್ಲಿ ಕಟ್ಟಡ ನಿರ್ಮಾಣ ಮಾಡಲು ಅಡಿಪಾಯಕ್ಕೆ ಗುಂಡಿ ತೆಯಲಾಗುತಿತ್ತು.
ಈ ವೇಳೆ ಪಕ್ಕದ ಕಟ್ಟಡ ಕಡೆಯಿಂದ ಮಣ್ಣು ಕುಸಿದಿದೆ. ಮಣ್ಣು ಕುಸಿದಾಗ ಇಬ್ಬರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ. ಈ ವೇಳೆ ಸ್ಥಳಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕೆಲಸ ಮಾಡಿದ್ದಾರೆ. ಕೆಲಸ ಮಾಡ್ತಿದ್ದ ಜೆಸಿಬಿ ಮೂಲಕ ಕಾಂಪೌಂಡ್ ಕೆಳಗೆ ಬೀಳದಂತೆ ತಡೆದು ಕೆಳಗೆ ಸಿಲುಕಿದ್ದವರ ರಕ್ಷಣೆ ಮಾಡಲು ಮುಂದಾಗಿದ್ದಾರೆ. ಈ ವೆಳೆ ಒರ್ವನ ರಕ್ಷಣೆ ಮಾಡಿದ್ದಾರೆ. ನಂತರ ಮತ್ತೊರ್ವನ ರಕ್ಷಣೆ ಮಾಡುವ ವೇಳೆ ಪಕ್ಕದ ಕಟ್ಟಡದ ಕಾಂಪೌಂಡ್ ಕುಸಿದು ಬಿದ್ದಿದೆ. ಪುನಃ ಜೆಸಿಬಿ ಹಾಗೂ ಎಸ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರೆ ಮೃತ ದೇಹ ಹೊರ ತಗೆದಿದ್ದಾರೆ.