ಬೆಂಗಳೂರು: ‘ತಮಿಳು-ಕನ್ನಡ ಭಾಷೆಗಳಷ್ಟೇ ಪ್ರಾಷೀನವಾದ, ಭಾಷಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಬೆಳವಣಿಗೆ ಹೊಂದಿರುವ ತುಳು ಭಾಷೆ ರಾಜ್ಯದ 2ನೇ ಅಧಿಕೃತ ಭಾಷೆ ಎಂದು ಘೋಷಿಸಲು ಅರ್ಹವಾಗಿದೆ’ ಎಂದು ಆಧಾರಗಳ ಸಹಿತ ಡಾ.ಎಂ. ಮೋಹನ್ ಆಳ್ವ ಅಧ್ಯಕ್ಷತೆಯ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ತುಳು ಭಾಷೆಯನ್ನು ರಾಜ್ಯದಲ್ಲಿ 2ನೇ ಅಧಿಕೃತ ಭಾಷೆಯನ್ನಾಗಿ ಫೋಷಿಸುವ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಬಸವರಾಜ ಬೊಮ್ಮಾಯಿ ನೇತೃತ್ವದ ಈ ಹಿಂದಿನ ಸರ್ಕಾರವು ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಇನ್ನು ವರದಿಯಲ್ಲಿ ‘ ದ್ರಾವಿಡ ಭಾಷಾ ವರ್ಗದ, ಪ್ರಾಚೀನ, ಸವತಂತ್ರವೂ ಆದ ತುಳು ಭಾಷೆಗೆ ರಾಜ್ಯದ ಹರಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ದೊರೆತರೆ, ಯುನೆಸ್ಕೋ ವರದಿಯಲ್ಲಿ ನಶಿಸಿ ಹೋಗುತ್ತಿರುವ ಭಾಷಾ ಪಟ್ಟಿಯಲ್ಲಿರುವ ಈ ಭಾಷೆ ಉಳಿಸಿ, ಬೆಳೆಸಿದ ಮತ್ತು ತುಳುವರಿಗೆ ಮತ್ತು ದೇಶ ವಿದೇಶಗಳಿಂದ ಬರುವ ತುಳುವರಿಗೆ ಬ್ಯಾಂಕಿಂಗ್ ವ್ಯವಹಾರ ನ್ಯಾಯಾಂಗ ವ್ಯವಸ್ಥೆ, ವಿವಿಧ ಇಲಾಖೆಗಳೊಂದಿಗೆ ಸಂವಹನ ಸುಲಭವಾಗುತ್ತದೆ. ಇದರಿಂದ ಆಡಳಿತ, ವ್ಯವಹಾರಗಳು ಹೆಚ್ಚು ಜನಸ್ನೇಹಿಯಾಗುತ್ತದೆ ಎಂದು ವರದಿಯಲ್ಲಿ ಪ್ರತಿಪಾದಿಸಲಾಗಿದೆ.
ಇನ್ನು ತುಳು ಭಾಷೆಯು ಪಂಚದ್ರಾವಿಡ ಭಾಷೆಗಳಲ್ಲಿ ಒಂದು ಎಂದು ಭಾಷಾಶಾಸ್ತ್ರಜ್ಞರು ಹಲವು ವರ್ಷಗಳಿಂದ ವಾದಿಸುತ್ತಿದ್ದರು. ‘ಪಂಚದ್ರಾವಿಡ ಭಾಷೆಗಳಲ್ಲಿ ಒಂದಾ ಗಿರುವ ತುಳು ಭಾಷೆಗೆ 2,600 ವರ್ಷ ಗಳ ದೀರ್ಘ ಇತಿಹಾಸವಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಿ ಭಾಷೆ ಗಳು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿವೆ. ಆದರೆ, ತುಳು ಭಾಷೆಗೆ ಮಾತ್ರ ಇನ್ನೂ ಕೇಂದ್ರ ಸರ್ಕಾರದಿಂದ ಮಾನ್ಯತೆಯು ದೊರೆತಿಲ್ಲ. ತುಳು ಭಾಷೆಗೆ ತೋರಿರುವ ತಾತ್ಸಾರ ಮನೋಭಾವದಿಂದ ಭಾಷೆಯ ಬೆಳವಣಿಗೆಗೆ ತೊಡಕಾಗಿದೆ’ ಎಂದು ಹಲವರು ಒತ್ತಾಯಿಸಿದ್ದರು.