ತುಮಕೂರು: ಅಕ್ರಮ ಕಸಾಯಿಖಾನೆ ಮೇಲೆ ಬಜರಂಗದಳದ ಮಾಹಿತಿ ಮೇರೆಗೆ ತಿಲಕ್ ಪಾರ್ಕ್ ಪೊಲೀಸರು ದಾಳಿ ಮಾಡಿದ್ದಾರೆ.
ಅಕ್ರಮವಾಗಿ ಕಟಾವು ಮಾಡಲು ಇರಿಸಿದ್ದ 6 ಗೋವುಗಳನ್ನು ರಕ್ಷಿಸಿದ್ದು, ಕಟಾವು ಮಾಡಿದ್ದ ಗೋವುಗಳ ಮಾಂಸ ವಶಕ್ಕೆ ಪಡೆದು ಒಬ್ಬನ ಬಂಧಿಸಿಲಾಗಿದೆ ಎಂದು ಬಜರಂಗದಳದ ಜಿಲ್ಲಾ ಸಂಚಾಲಕ ಮಂಜುಭಾರ್ಗವ್ ತಿಳಿಸಿದ್ದಾರೆ.
ನವೆಂಬರ್ 25 ರಂದು 6 ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಯಲ್ಲಿ ಇರಿಸಿದ್ದರ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ, ತಿಲಕ್ ಪಾರ್ಕ್ ಪೊಲೀಸರಿಗೆ ದೂರು ನೀಡಿ ಪೊಲೀಸರ ನೇತೃತ್ವದಲ್ಲಿ ದಾಳಿ ನೆಡೆಸಿದೆ.
ರಕ್ಷಣೆ ಮಾಡಲಾದ 6 ಗೋವುಗಳನ್ನು ಗೋ ಶಾಲೆಗೆ ರವಾನಿಸಲಾಗಿದೆ, ನ್ಯಾಯಾಲಯದ ಆದೇಶದ ಮೇರೆಗೆ ವಶಕ್ಕೆ ಪಡೆದಿದ್ದ ಗೋ ಮಾಂಸವನ್ನು ನಾಶ ಪಡಿಸಲಾಗಿದೆ.
ಇದೇ ಸಂದರ್ಭದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ 25-30 ಜನರ ಗೋ ಕಳ್ಳರ ತಂಡವು ಬಜರಂಗದಳದ ಕಾರ್ಯಕರ್ತರನ್ನು ಕೊಲೆ ಮಾಡಲು ಯತ್ನಿಸಿದ್ದು, ಈ ತಂಡದ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿಲಾಗಿದೆ. 6ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರು ಸಹ ಅಕ್ರಮ ಕಸಾಯಿಖಾನೆಗಳ ವಿರುದ್ದ ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಗೋ ಹತ್ಯೆ ಮತ್ತು ಅಕ್ರಮ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಬಜರಂಗದಳದ ಕಾನೂನಾತ್ಮಕ ಹೋರಾಟನಿಲ್ಲದು ಎಂದು ಅವರು ತಿಳಿಸಿದ್ದಾರೆ.
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…