ತುಮಕೂರು : ಜನರ ಸಹಭಾಗಿತ್ವ ಇಲ್ಲದಿದ್ದರೆ ಅಭಿವೃದ್ಧಿಗೆ ಯಾವುದೇ ಅರ್ಥ ಇರುವುದಿಲ್ಲ , ಸರ್ಕಾರಗಳು ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಯೋಜನೆಗಳಲ್ಲಿ ಅವರನ್ನು ತೊಡಗಿಸಿಕೊಂಡಾಗ ಯೋಜನೆಗಳಿಗೆ ಸಾರ್ಥಕತೆ ಲಭಿಸುತ್ತದೆ ಎಂದು ಅರ್ಥಶಾಸ್ತçಜ್ಞ ಹಾಗೂ ಬೆಂಗಳೂರಿನ ಇನ್ಸಿ÷್ಟಟ್ಯೂಟ್ ಆಫ್ ಫೈನಾನ್ಸ್ ಅಂಡ್ ಇಂಟರ್ನ್ಯಾಷನಲ್ ಮ್ಯಾನೇಜ್ಮೆಂಟ್ ಇದರ ಪ್ರಾಧ್ಯಾಪಕ ಡಾ. ಎಂ ಮಹದೇವ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ,ದೇಶದ ಅಭಿವೃದ್ಧಿ ಏಕಮುಖವಾಗಿರಲು ಸಾಧ್ಯವಿಲ್ಲ. ಎಲ್ಲರೂ ಅದರ ಭಾಗವಾಗಬೇಕು. ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಶಿಕ್ಷಣರಂಗವೂ ಪಾಲ್ಗೊಳ್ಳಬೇಕು. ಪ್ರಾಧ್ಯಾಪಕರು ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಲೇಖನಗಳನ್ನು ಪ್ರಕಟಿಸಬೇಕು ಎಂದು ಅಭಿಪ್ರಾಯ ಪಟ್ಟರು.