News Karnataka Kannada
Friday, May 03 2024
ತುಮಕೂರು

ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಸಿದ್ಧಗಂಗಾ ಮೆಡಿಕಲ್​ ಕಾಲೇಜಿನಲ್ಲಿ ಉಚಿತ ಶಿಕ್ಷಣ

Siddalinga Swamiji
Photo Credit :

ತುಮಕೂರು:  ​ಉಕ್ರೇನ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ತುಮಕೂರು ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ ಬಳಿಕ ಅವರ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗದಂತೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯವು ಅವಕಾಶ ಕಲ್ಪಿಸಿದೆ.

ಒಟ್ಟು 27 ವಿದ್ಯಾರ್ಥಿಗಳು ಯುದ್ಧಾತಂಕದ ಬಳಿಕ ಭಾರತಕ್ಕೆ ಮರಳಿದ್ದರು. ಈ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆತಂಕದ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೆರವಿಗೆ ಧಾವಿಸಿದ್ದಾರೆ. ಮಠದ ಕಾಲೇಜಿನಲ್ಲಿ 16 ವಿದ್ಯಾಥಿರ್ಗಳಿಗೆ ಪ್ರಾಯೋಗಿಕ ತರಗತಿ, ಗ್ರಂಥಾಲಯ ಸೇರಿದಂತೆ ಅಗತ್ಯ ನೆರವು ನೀಡಿ ಕ್ಲಿನಿಕಲ್​ ಸಪೋರ್ಟ್​ ಸಿಗುವಂತೆ ಮಾಡಲಾಗಿದೆ. ಸದ್ಯ ವೈದ್ಯಕೀಯ ಕೋರ್ಸ್​ಗೆ ಪೂರಕ ಹಾಗೂ ಬೆಂಬಲವಾಗಿ ಕಾಲೇಜು ಸಿಬ್ಬಂದಿ ನಿಂತಿದ್ದಾರೆ. ಈ ಮಕ್ಕಳ ಮುಂದಿನ ವೈದ್ಯಕೀಯ ಪರೀಕ್ಷೆಗಳ ಬಗ್ಗೆ ಸರ್ಕಾರವೇ ನಿರ್ಧರಿಸಲಿದೆ.

ಉಕ್ರೇನ್ ​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆತಂದಿದ್ದು ಅವರ ವಿದ್ಯಾಭ್ಯಾಸ ಮೊಟಕಾಗಬಾರದು ಎನ್ನುವ ಉದ್ದೇಶದಿಂದ ಕಾಲೇಜಿನಲ್ಲಿ ಶಿಕ್ಷಣ ಮುಂದುವರಿಸಲು ಅವಕಾಶ ನೀಡಲಾಗಿದೆ ಎಂದು ಸಿದ್ದಲಿಂಗ ಶ್ರೀಗಳು ವಿಜಯವಾಣಿಗೆ ಮಾಹಿತಿ ನೀಡಿದ್ದಾರೆ.

ನಮ್ಮ ಜಿಲ್ಲೆಯಿಂದ ಒಟ್ಟು 27 ವಿದ್ಯಾರ್ಥಿಗಳು ಯೂಕ್ರೇನ್​ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು, ಅದರಲ್ಲಿ ನಮ್ಮಲ್ಲಿಗೆ ಬಂದಿರುವ 16 ವಿದ್ಯಾರ್ಥಿಗಳಿಗೆ ಸದ್ಯ ಪ್ರಾಯೋಗಿಕ ತರಗತಿ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ವೆಚ್ಚ ಪಡೆಯದೆ ಉಚಿತ ಶಿಕ್ಷಣ ನೀಡುತ್ತಿದ್ದೇವೆ. ಯೂಕ್ರೇನ್​ನಿಂದ ಆನ್​ಲೈನ್​ ತರಗತಿಗಳ ಮೂಲಕ ಬೋಧನೆ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಪ್ರಾಕ್ಟಿಕಲ್​ ತರಬೇತಿ ಪಡೆಯುತ್ತಿದ್ದಾರೆ ಎಂದು ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಎಸ್​.ಪರಮೇಶ್​ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು