News Karnataka Kannada
Monday, May 13 2024
ತುಮಕೂರು

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತ

Woman killed in accident, son Ashwin and husband critically injured
Photo Credit :

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆತಿಪಟೂರು ತಾಲೂಕಿನ ಮತಿಘಟ್ಟ ಗೇಟ್ ಬಳಿ ನಡೆದಿದೆ.

ತಾಲ್ಲೂಕಿನ ಮತ್ತಿಹಳ್ಳಿ ಗೇಟ್ ಬಳಿಯಲ್ಲಿ ಮಂಗಳವಾರ ಸಂಜೆ ಅಪಘಾತ ಸಂಭವಿಸಿದ್ದು ಬ್ರೀಜಾ ಹಾಗೂ ಸ್ವಿಫ್ಟ್ ಕಾರ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಇದರಿಂದಾಗಿ ಸ್ವಿಫ್ಟ್ ಕಾರಿನಲ್ಲಿ ಇದ್ದ ಗುಬ್ಬಿ ತಾಲ್ಲೂಕಿನ ಕಡಬಾ ಹೋಬಳಿಯ ಬೆಲವತ್ತ ಗ್ರಾಮದ ವಾಸಿ ವೆಂಕಟಾಚಲ (49), ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಮಾವಿನಹಳ್ಳಿ ಗ್ರಾಮದ ವಾಸಿ ಶೇಖರಯ್ಯ(45) ಮೃತ ದುರ್ದೈವಿಗಳು.

ಇನ್ನೂ ಮತ್ತೊಂದು ಬ್ರೀಜಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಂಡ್ಯವಾಸಿಗಳಾದ ಚಂದನ್, ಜಗದೀಶ್, ಗೋಪಿನಾಥ್, ಪ್ರವೀಣ್ ತೀವ್ರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ತಿಪಟೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಲ್ಲೂಕಿನ ಹೊನ್ನವಳ್ಳಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು