ತುಮಕೂರು : ತುಮಕೂರಿನ ಸಿದ್ಧಗಂಗಾ ಮತ್ತು ವಾದಿರಾಜ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ತಿಳಿಸಿದ್ದಾರೆ.
ಕೇರಳದಿಂದ ಬಂದ 15 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಒಮಿಕ್ರಾನ್ ಭೀತಿ ಇರುವುದರಿಂದ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ಅವರ ಗಂಟಲ ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂದರು.
ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳು ಕನಿಷ್ಠ ಒಂದು ಡೋಸ್ ತೆಗೆದುಕೊಂಡಿದ್ಗರೆ ಮಾತ್ರ ತರಗತಿಗೆ ಬರಲು ಅವಕಾಶ ನೀಡಲಾಗಿದೆ. ಈ ಕುರಿತು ಎಲ್ಲಾ ಕಾಲೇಜುಗಳಿಗೆ ಆದೇಶ ಕಳುಹಿಸಲಾಗಿದೆ.