ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ಯುವಕರ ಶವಗಳು ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಪೆದ್ದನಹಳ್ಳಿಯ ಗಿರೀಶ್ (35) ಹಾಗೂ ಮಂಚಲದೊರೆ ಗ್ರಾಮದ ಗಿರೀಶ್(33) ಎಂದು ಗುರುತಿಸಲಾಗಿದೆ.
ಇಬ್ಬರಲ್ಲಿ ಒಬ್ಬರ ಶವ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದ್ದು, ಇನ್ನೊಬ್ಬನ ಶವ ರಸ್ತೆ ಮೇಲೆ ಪತ್ತೆಯಾಗಿದೆ. ಮೃತರು ಈ ಹಿಂದೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಎನ್ನುವ ಆರೋಪಗಳಿದ್ದು, ಇಬ್ಬರ ಮೇಲೆ ಗುಬ್ಬಿ ಪಟ್ಟಣ ಹಾಗೂ ಚೇಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣಗಳು ಇದ್ದಾವೆ ಎನ್ನಲಾಗಿದೆ. ಇನ್ನೂ ಇಬ್ಬರು ರಾತ್ರಿ ಕಳ್ಳತನ ಮಾಡಲು ಆಗಮಿಸಿದ್ದ ವೇಳೆಯಲ್ಲಿ ಯಾರೋ ಇವರನ್ನು ಕೊಲೆ ಮಾಡಿ ಬಿಸಾಕಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಪ್ರಕರಣ ಸಂಬಂಧ ಗುಬ್ಬಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೋಲಿಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.