ತುಮಕೂರು : ದಲಿತ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಪೊಲೀಸರು ಅಡ್ಡಿಪಡಿಸಿರುವ ಘಟನೆ ತುಮಕೂರು ನಗರದ ಭೀಮಸಂದ್ರದಲ್ಲಿ ಸೋಮವಾರ (ಜ.24) ನಡೆದಿದೆ.
ಮಣ್ಣು ಮಾಡುವ ಜಾಗ ಬೇರೆಯವರಿಗೆ ಸೇರಿದ್ದು ಎಂದು ಅಂತ್ಯ ಸಂಸ್ಕಾರವನ್ನು ನಿಲ್ಲಿಸಿದ್ದಾರೆ. ಅಲ್ಲದೆ, ತೆಗೆದಿದ್ದ ಗುಂಡಿಯನ್ನು ಮುಚ್ಚಿಸುವ ಮೂಲಕ ಪೊಲೀಸರು ಅಮಾನವೀಯತೆ ಮೆರೆದಿದ್ದಾರೆ.
ಮಂಜುನಾಥ್ (50) ಎಂಬುವರ ಅಂತ್ಯ ಸಂಸ್ಕಾರಕ್ಕೆ ಕುಟುಂಬ ಮುಂದಾಗಿತ್ತು. ಬೆಳಗ್ಗೆ 10 ಗಂಟೆಗೆ ಮೃತದೇಹ ತರಲಾಗಿತ್ತು. ಈ ವೇಳೆ ಹೋಯ್ಸಳ ಜೀಪ್ನಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಮೃತರ ಕುಟುಂಬವನ್ನು ತಡೆದಿದ್ದಾರೆ. ಈ ಮುಂಚೆ ಇದೇ ಜಾಗದಲ್ಲಿ ದಲಿತ ಮಹಿಳೆಯ ಅಂತ್ಯ ಸಂಸ್ಕಾರವನ್ನು ಮಾಡಿದ್ದರು. ಇದೀಗ ಈ ಜಾಗ ಸೌಭಾಗ್ಯಮ್ಮ ಎಂಬುವರ ಹೆಸರಿಗೆ ಸೇರಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ.
ಸೌಭಾಗ್ಯಮ್ಮರ ಹೆಸರಿನಲ್ಲೇ ಭೂಮಿ ಇರುವ ಬಗ್ಗೆ ದಾಖಲೆ ಇದೆ ಎಂದು ಪೊಲೀಸರು ವಾದಿಸಿದ್ದು, ಹೆಣದ ಮುಂದೆಯೇ ಪೊಲೀಸ್ ಮತ್ತು ಕುಟುಂಬಸ್ಥರ ನಡುವೆ ವಾಕ್ಸಮರ ನಡೆದಿದೆ. ಸದ್ಯ ಅಂತ್ಯಸಂಸ್ಕಾರವಾಗದೇ ವಿವಾದಿತ ಸ್ಥಳದಲ್ಲೇ ಇರುವ ಮೃತದೇಹಕ್ಕೆ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದಲೂ ಹೆಣ ಇಟ್ಟುಕೊಂಡು ಅಂತ್ಯ ಸಂಸ್ಕಾರಕ್ಕೆ ಕಾಯುತ್ತಿದ್ದಾರೆ. ಇದು ದಲಿತರಿಗೆ ಅಂತ ಇರೋ ಇಮಾಮ್ತಿ ಜಮೀನು ಎಂದು ದಲಿತ ಕುಟುಂಬದವರು ಹೇಳುತ್ತಿದ್ದಾರೆ. ಮೊದಲಿನಿಂದಲೂ ಇದೇ ಜಾಗದಲ್ಲಿ 400 ಕ್ಕೂ ಹೆಚ್ಚು ಅಂತ್ಯಸಂಸ್ಕಾರ ಮಾಡಿದ್ದೇವೆ ಎಂದು ಹೇಳಿದ್ದಾರೆ
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…
ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.
ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…
ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಡೀಪ್ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್ಟಿಎಫ್ ತಂಡ…