ತುಮಕೂರು ; 2020-21ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವವರಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತುಮಕೂರು ವಿಶ್ವವಿದ್ಯಾನಿಲಯವು ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
ಅದಕ್ಕಿಂತ ಮೊದಲಿನ ಇಂಟರ್ಮೀಡಿಯೇಟ್ ಸೆಮಿಸ್ಟರ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ. ಯುಜಿಸಿ ಸೂಚನೆಯಂತೆ ಆಂತರಿಕ ಮೌಲ್ಯಮಾಪನ ಹಾಗೂ ಹಿಂದಿನ ಸೆಮಿಸ್ಟರ್ಗಳ ಫಲಿತಾಂಶದ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು.
ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸರ್ಕಾರದ ನಿರ್ದೇಶನವನ್ನು ಕೋರಿದ್ದು, ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.