ತುಮಕೂರು: 2023ರ ವಿಧಾನಸಭೆ ಚುನಾವಣೆ 2013ರ ಚುನಾವಣೆ ರಣತಂತ್ರವನ್ನು ಮರುಕಳಿಸುವ ಸಾಧ್ಯತೆಯಿದೆ.
ಮಾಜಿ ಡಿಸಿಎಂ ಪರಮೇಶ್ವರ್ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸಲು ಸಿದ್ದತೆ ನಡೆಸುತ್ತಿದ್ದಾರೆ.
ಪರಮೇಶ್ವರ ಅವರ ಗೆಲುವು ತಮ್ಮ ನಾಯಕನಿಗೆ ಅಡ್ಡಿಯಾಗುತ್ತದೆ ಎಂಬ ಆತಂಕದಿಂದಲೇ ಸಿದ್ದರಾಮಯ್ಯ ಅವರ ಬೆಂಬಲಿಗರು ಪರಮೇಶ್ವರ ಅವರನ್ನು ಸೋಲಿಸಲು ಕಾರ್ಯತಂತ್ರ ರೂಪಿಸುತ್ತಿದೆ.
ಈ ಬಾರಿ ಮೇ 28ರಂದು ತುಮಕೂರಿನಲ್ಲಿ ನಡೆಯಲಿರುವ ಪಕ್ಷದ ಸಮಾವೇಶದ ನೆಪದಲ್ಲಿ ಕುರುಬ ಮುಖಂಡರು ಕೊರಟಗೆರೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಸಮುದಾಯವನ್ನು ಸಂಘಟಿಸುತ್ತಿರುವುದು ಕುತೂಹಲ ಮೂಡಿಸಿದೆ.
ಎಲ್ಲ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂದು ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಕೃಷ್ಣಮೂರ್ತಿ ಹೇಳಿದ್ದಾರೆ.
ಸಿದ್ದರಾಮಯ್ಯನವರ ಕೈ ಬಲಪಡಿಸುವಂತೆ ಮುಖಂಡರು ಕುರುಬ ಸಮುದಾಯಕ್ಕೆ ಕರೆ ನೀಡಿದ್ದಾರೆ, ಇದರರ್ಥ ತುಮಕೂರು ಜಿಲ್ಲೆಯಲ್ಲಿಯೂ ಸಿದ್ದರಾಮಯ್ಯನವರ ಬೆಂಬಲಿಗರು ರಾಜಕೀಯ ಹೋರಾಟಕ್ಕೆ ಕರೆ ನೀಡುವ ಸಾಧ್ಯತೆಯಿದೆ.