News Karnataka Kannada
Wednesday, May 15 2024
ತುಮಕೂರು

ಪಾವಗಡದಲ್ಲಿ ಖಾಸಗಿ ಬಸ್ ದುರಂತ : ಮೃತರ ಸಂಖ್ಯೆ 7ಕ್ಕೇರಿಕೆ

Pavgada
Photo Credit :

ತುಮಕೂರು : ತುಮಕೂರು ಜಿಲ್ಲೆ ಪಾವಗಡ ಪಳವಳ್ಳಿ ಗ್ರಾಮದಲ್ಲಿ ಖಾಸಗಿ ಬಸ್ ದುರಂತದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 18 ವರ್ಷದ ಮಹೇಂದ್ರ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.ಕಳೆದ ಒಂದು ವಾರದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತವಾಗಿ 6 ಜನರು ಮೃತಪಟ್ಟಿದ್ದರು, ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಪಾವಗಡ ತಾಲೂಕಿನ ಬುಡ್ಡಾರೆಡ್ಡಿಹಳ್ಳಿ ಗ್ರಾಮದ ನಿವಾಸಿ ಮಹೇಂದ್ರ ಇಂದು ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು