ತುಮಕೂರು : ತುಮಕೂರು ಜಿಲ್ಲೆ ಪಾವಗಡ ಪಳವಳ್ಳಿ ಗ್ರಾಮದಲ್ಲಿ ಖಾಸಗಿ ಬಸ್ ದುರಂತದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 18 ವರ್ಷದ ಮಹೇಂದ್ರ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.ಕಳೆದ ಒಂದು ವಾರದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತವಾಗಿ 6 ಜನರು ಮೃತಪಟ್ಟಿದ್ದರು, ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಪಾವಗಡ ತಾಲೂಕಿನ ಬುಡ್ಡಾರೆಡ್ಡಿಹಳ್ಳಿ ಗ್ರಾಮದ ನಿವಾಸಿ ಮಹೇಂದ್ರ ಇಂದು ಮೃತಪಟ್ಟಿದ್ದಾರೆ.