ತುಮಕೂರು : ಏಷ್ಯಾದ ಅತಿದೊಡ್ಡ ಸೋಲಾರ್ ಘಟಕಗಳಲ್ಲಿ ಒಂದು ಎಂಬುದಾಗಿ ಕರೆಸಿಕೊಂಡಿದ್ದು, ಪಾವಗಡದ ಸೋಲಾರ್ ಘಟಕವಾಗಿದೆ. ಈ ಘಟಕಕ್ಕೆ ಇಂದು ಪಾರ್ಕ್ ನ ಒಣಹುಲ್ಲಿಗೆ ಬಿದ್ದಂತ ಬೆಂಕಿ, ಕ್ಷಣಾರ್ಧದಲ್ಲಿ ಸೋಲಾರ್ ಘಟಕಕ್ಕೂ ವ್ಯಾಪಿಸಿದ ಪರಿಣಾಮ, 70 ಎಕರೆಯಲಲ್ಲಿದ್ದಂತ ಕೇಬಲ್ ವೈಯರ್ ಸೇರಿದಂತೆ ವಿವಿಧ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ.
ಪಾವಗಡದಲ್ಲಿ ಏಷ್ಯಾದಲ್ಲಿಯೇ ಅತಿದೊಡ್ಡ ಸೋಲಾರ್ ಘಟಕ ನಿರ್ಮಾಣವಾಗಿತ್ತು. ಈ ಘಟಕವನ್ನು ಆಂಧ್ರಪ್ರದೇಶ ಮೂಲಕ ಸಿದ್ಧಾರ್ಥ ಸಂಸ್ಥೆಯ ನಿರ್ವಹಣೆ ಮಾಡುತ್ತಿತ್ತು. ಇಂದು ಬೇಸಿಗೆಯಲ್ಲಿ ಒಣಗಿದ್ದಂತ ಹುಲ್ಲಿಗೆ ಬಿದ್ದಂತ ಬೆಂಕಿಯು, ಸೋಲಾರ್ ಘಟಕಕ್ಕೂ ವ್ಯಾಪಿಸಿದೆ. ಈ ಪರಿಣಾಮ 70 ಎಕರೆಯಲ್ಲಿದ್ದ ಕೇಬಲ್ ವೈಯರ್, ಆಸೆಮ್ಲಿ ಬಾಕ್ಸ್ ಸೇರಿದಂತೆ ವಿವಿಧ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.
ಸೋಲಾರ್ ಘಟಕಕ್ಕೆ ಬೆಂಕಿ ಬಿದ್ದ ವಿಷಯ ತಿಳಿದು ಸ್ಥಳೀಯರು ಕೂಡಲೇ ಬೆಂಕಿ ನಂದಿಸೋದಕ್ಕೆ ನೆರವಾಗಿದ್ದಾರೆ. ಈ ಪರಿಣಾಮ ಇನ್ನೂ ಬೆಂಕಿಯಿಂದ ಮುಂದೆ ಆಗಲಿದ್ದಂತ ಮತ್ತಷ್ಟು ಅನಾಹುತ ತಪ್ಪಿದೆ. ಜೊತೆಗೆ ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸೋ ಕಾರ್ಯ ಮಾಡಿದ್ದಾರೆ. ಈ ಘಟಕಕ್ಕೆ ಬೆಂಕಿ ಬೀಳಲು ಸಿದ್ಧಾರ್ಥ ಸಂಸ್ಥೆಯ ಅಸಮರ್ಪಕ ನಿರ್ವಹಣೆಯ ಕೊರತೆಯೇ ಕಾರಣ ಎಂಬುದಾಗಿ ಆರೋಪಿಸಲಾಗಿದೆ.
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…