ತುಮಕೂರು: ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರ ಕಡಿಯುತ್ತಿರುವುದು ತಿಳಿದು ಪರಿಶೀಲನೆಗೆ ಮುಂದಾದಾಗ ಏಕಾಏಕಿ ದಾಳಿ ನಡೆಸಿದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿ ಫೈರಿಂಗ್ ನಡೆಸಿ, ಓರ್ವ ಶ್ರೀಗಂಧದ ಮರ ಕಡಿಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಕೆರೆಯಲ್ಲಿ ನಡೆದಿದೆ. ಹುಲಿಯೂರು ದುರ್ಗ ವ್ಯಾಪ್ತಿಯ ಕೆಂಕೆರೆ ಮೀಸಲು ಅರಣ್ಯ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಶ್ರೀಗಂಧದ ಮರ ಕಡಿಯುತ್ತಿದ್ದರು. ಇದೇ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗೆ ವಿಷಯ ತಿಳಿದು ಪರಿಶೀಲನೆಗೆ ಮುಂದಾದರು. ಅದರೆ ಶ್ರೀಗಂಧದ ಮರ ಕಡಿಯುತ್ತಿದ್ದವರು ಏಕಾಏಕಿ ದಾಳಿ ಮಾಡಲು ಯತ್ನಿಸಿದರು. ಹೀಗಾಗಿ ಅಧಿಕಾರಿ ಗುಂಡು ಹಾರಿಸಿದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಮೀಸಲು ಅರಣ್ಯದಲ್ಲಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಯಿಂದ ಫೈರಿಂಗ್; ಓರ್ವ ಸಾವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.